Monday, May 20, 2024

ನಾನು ರಾಜಕೀಯ ಮಾಡಿದ್ರೆ ಮಂಡ್ಯದಿಂದಲೇ ಮಾಡ್ತೀನಿ : ಪಟ್ಟು ಬಿಡದ ಸುಮಲತಾ

ಬೆಂಗಳೂರು : ನಾನು ರಾಜಕೀಯ ಮಾಡಿದ್ರೆ ಮಂಡ್ಯದಿಂದಲೇ ಮಾಡ್ತೀನಿ ಅಂತ ಹೇಳಿದ್ದೆ. ಈಗಲೂ ಅದನ್ನೇ ಹೇಳ್ತಿದ್ದೀನಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ದೆಹಲಿ ಬೇಟಿ ಬಳಿಕ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಕರೆ ಹಿನ್ನೆಲೆ ದೆಹಲಿಗೆ ಹೋಗಿದ್ದೆ ಎಂದು ತಿಳಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ದೆಹಲಿಯಲ್ಲಿ ಚರ್ಚೆ ಮಾಡಿದ್ದೀನಿ. ಅಭ್ಯರ್ಥಿ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಅಂತ ಹೇಳಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಹ ಮಾರ್ಚ್ 22ರ‌ವರೆಗೂ ಫೈನಲ್ ಆಗಲ್ಲ ಅಂದಿದ್ದಾರೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಅಂತ ಹೇಳ್ತಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಕೂತು ಅಂತಿಮ ನಿರ್ಧಾರ ಮಾಡ್ತಾರೆ. ಬೇರೆಯವರು ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಅಂತ ಹೇಳ್ತಿದ್ದಾರೆ. ಪ್ರಧಾನಿಯವರೇ ನನ್ನನ್ನ ಕರೆಸಿ ಮಾತನಾಡಿ ಅಂತ ಹೇಳಿದ್ರು. ಹೀಗಾಗಿ ನನ್ನನ್ನ ಕರೆಸಿದ್ದಾಗಿ ಜೆ.ಪಿ. ನಡ್ಡಾ ಅವರು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ಪಾಸಿಟಿವ್ ಆಗಿ ರಿಸಲ್ಟ್ ಬರುತ್ತದೆ

ಪಕ್ಷದಲ್ಲಿ ನನ್ನ ಬಗ್ಗೆ ತುಂಬಾ ಗೌರವವಿದೆ. ಪಕ್ಷದಲ್ಲಿ ಇರಬೇಕು ಅಂತ ಅವರು ಹೇಳಿದ್ದಾರೆ. ಪಾಸಿಟಿವ್ ಆಗಿ ರಿಸಲ್ಟ್ ಬರುತ್ತೆ ಎಂಬ ವಿಶ್ವಾಸವಿದೆ. ವರಿಷ್ಠರು ಯಾವ ತೀರ್ಮಾನ ಮಾಡ್ತಾರೆ ಅಂತ ಕಾದು ನೋಡೋಣ ಎಂದು ಸುಮಲತಾ ಅಂಬರೀಶ್ ಹೇಳಿದರು.

RELATED ARTICLES

Related Articles

TRENDING ARTICLES