ಶಿವಮೊಗ್ಗ : ಲೋಕಸಭಾ ಚುನಾವಣೆ ಬಳಿಕ ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗ ನಗರ ವಿಧಾಸಭಾ ಕ್ಷೇತ್ರದ ಮುಖಂಡರೊಂದಿಗೆ ತಮ್ಮ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ವಿಧಾನಸಭಾ ಚುನಾವಣೆ ಬಳಿಕ ಆರು ತಿಂಗಳುಕಾಲ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿಯಾಗಿಯೇ ಇತ್ತು ಬಿ.ಎಸ್ ಯಡಿಯೂರಪ್ಪ ಅವರು ಹಠಕ್ಕೆ ಬಿದ್ದು ತಮ್ಮ ಪುತ್ರ ವಿಜಯೇಂದ್ರ ಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದರು.
ಲೋಕಸಭಾ ಚುನಾವಣೆ ಬಳಿಕ ನನ್ನ ರಾಜ್ಯ ಬಿಜೆಪಿ ಪಕ್ಷದಲ್ಲಿ ಮಹತ್ತರವಾದ ಬದಲಾವಣೆಗಳಾಗಲಿದ್ದು ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೆಳಗಿಳಿಯಲಿದ್ದಾರೆ ಎಂದು ಭವಿಷ್ಯ ನುಡಿದ್ದಾರೆ. ಜೊತೆಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನಗೆ ಜಯ ಸಿಗಲಿದೆ ಎಂದು ಅವರು ತಿಳಿಸಿದರು.
ಲೋಕಸಭಾ ಚುನಾವಣೆಗೆ ಸ್ಪರ್ಧೆ ಖಚಿತ :
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮುಖಂಡರೊಂದಿಗೆ ಸಭೆ ನಡೆಸಿದ ಕೆಎಸ್ ಈಶ್ವರಪ್ಪ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಫರ್ಧಿಸುವುದು ಖಚಿತ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ ಎಂದರು. ಸಭೆಯಲ್ಲಿ ಭಾಗಿಯಾಗಿದ್ದ ನೂರಾರು ಕಾರ್ಯಕರ್ತರು ಹಾಗು ಬೆಂಬಲಿಗರ ಮುಂದೆ ಈಶ್ವರಪ್ಪ ಸ್ಪಷ್ಟನೆ ನೀಡಿದರು. ನಾಮಪತ್ರ ಸಲ್ಲಿಕೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಲಿಗರು ಆಗಮಿಸುವಂತೆ ಕರೆ ನೀಡಿದರು.