ಬೀದರ್ : ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಘೋಷಣೆಗೂ ಮುನ್ನವೇ, ಸೋಷಿಯಲ್ ಮಿಡಿಯಾದಲ್ಲಿ ಸಾಗರ್ ಖಂಡ್ರೆ ಪರ ಪೋಸ್ಟ್ಗಳು ಹರಿದಾಡುತ್ತಿವೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಬಹುತೇಕ ಟಿಕೆಟ್ ಖಚಿತ ಎನ್ನಲಾಗಿದೆ.
ಈಗಾಗಲೇ ಸಾಗರ್ ಖಂಡ್ರೆ ಅಭಿಮಾನಿಗಳು ಸಾಗರ್ ಖಂಡ್ರೆ ಪರ ಪೋಸ್ಟ್ಗಳನ್ನ ಹಂಚಿಕೊಳ್ಳುತ್ತಿದ್ದು, ಮುಂದಿನ ಎಂಪಿ ಸಾಗರ್ ಖಂಡ್ರೆ, ಯುವನಾಯಕ ಅಂತೆಲ್ಲಾ ಪೋಸ್ಟ್ಗಳನ್ನ ಬರೆದುಕೊಂಡು ಪೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಅಷ್ಟೇ ಅಲ್ಲದೇ ಟಿಕೆಟ್ ಘೋಷಣೆಗೂ ಮುನ್ನವೇ ಭಾಲ್ಕಿ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಖಂಡ್ರೆ ಅಭಿಮಾನಿಗಳು ಸಂಭ್ರಮಿಸಿದ್ದು, ಮುಂದಿನ ಎಮ್ಪಿ ಸಾಗರ್ ಖಂಡ್ರೆ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದ್ದಾರೆ.
ಸಿದ್ದರಾಮಯ್ಯ ಭೇಟಿಯಾದ ಖಂಡ್ರೆ
ಇತ್ತ, ಈಶ್ವರ್ ಖಂಡ್ರೆ ಅವರು ತಮ್ಮ ಪುತ್ರ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಸಾಗರ್ ಖಂಡ್ರೆ ಅವರೊಂದಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಸಾಗರ್ ಅವರ ಭವಿಷ್ಯ ಉಜ್ವಲವಾಗಿರಲೆಂದು ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಈ ವೇಳೆ ರಹೀಂ ಖಾನ್ ಸೇರಿ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈಶ್ವರ್ ಖಂಡ್ರೆ ಅವರ ಪುತ್ರ, ಬೀದರ್ ಲೋಕಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಸಾಗರ್ ಖಂಡ್ರೆ ಅವರು ಇಂದು ನನ್ನನ್ನು ಭೇಟಿಯಾದರು. ಈ ವೇಳೆ ಅವರ ಭವಿಷ್ಯ ಉಜ್ವಲವಾಗಿರಲೆಂದು ಶುಭ ಹಾರೈಸಿದೆ.
ಸಚಿವರಾದ @eshwar_khandre, ರಹೀಂ ಖಾನ್ ಸೇರಿ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/jMvJmMLNRN— Siddaramaiah (@siddaramaiah) March 21, 2024