ರಾಮನಗರ: ಎಟಿಎಂ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 5.30 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ನಡೆದಿದೆ.
ಇದನ್ನೂ ಓದಿ: ಮಾಜಿ ಸಚಿವ ಡಾ.ಸುಧಾಕರ್ ರಿಂದ ಧಮ್ಕಿ : ಎಸ್.ಆರ್ ವಿಶ್ವನಾಥ್ ಆರೋಪ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸೇರಿದ ವಾಹನ ಮತ್ತು ಹಣ ಇದಾಗಿದ್ದು ತಪಾಸಣೆ ವೇಳೆ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ತೋರಿಸದ ಕಾರಣ 5.30 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಸೂಕ್ತ ದಾಖಲೆಗಳನ್ನು ನೀಡಿ ಹಣ ವಾಪಾಸ್ ಪಡೆಯುವಂತೆ ಬ್ಯಾಂಕ್ ಸಿಬ್ಬಂದಿಗಳಿಗೆ ಚುನಾವಣಾಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಗಡಿ ಪ್ರದೇಶಗಳಲ್ಲಿ ಪೊಲೀಸ್ ಕಣ್ಗಾವಲು ಹೆಚ್ಚಿಸಿದ್ದು ಅಕ್ರಮವಾಗಿ ಸಾಗಾಟ ಮಾಡುವ ಬೆಲೆಬಾಳುವ ವಸ್ತುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.