ತುಮಕೂರು : ಲೋಕಸಭಾ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗಲಿದ್ದು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ ಎಂದು ಹೇಳುವ ಮೂಲಕ ಗುಬ್ಬಿ ಶಾಸಕ ಶ್ರೀನಿವಾಸ್ ಅವರು ಸಂಚಲನ ಮೂಡಿಸಿದ್ದಾರೆ.
ಜಿಲ್ಲೆಯ ತಿಪಟೂರಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಮಾಜಿ ಸಚಿವ ಡಾ.ಸುಧಾಕರ್ ರಿಂದ ಧಮ್ಕಿ : ಎಸ್.ಆರ್ ವಿಶ್ವನಾಥ್ ಆರೋಪ
ರಾಜ್ಯದಲ್ಲಿ ಇಂದು ನಮ್ಮ ಸರ್ಕಾರ ಇದೆ, ಲೋಕಸಭ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸದಿದ್ದರೇ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ, ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯರನ್ನು ಎಲ್ಲಾ ಕಾರ್ಯಕರ್ತರು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು.