Wednesday, May 8, 2024

ಲೋಕಸಭಾ ಚುನಾವಣೆಯ ನಂತರ ಸಿ.ಎಂ ಚೇಂಜ್​ ಆಗ್ತಾರೆ : ಸುಳಿವು ಕೊಟ್ಟ ಶಾಸಕ ಎಸ್.ಆರ್.ಶ್ರೀನಿವಾಸ್

ತುಮಕೂರು: ಲೋಕಸಭಾ ಚುನಾವಣೆಯ ನಂತರ ಸಿಎಂ ಚೇಂಜ್ ಆಗ್ತಾರೆ ಎಂಬ ಸುಳಿವುನ್ನು ಶಾಸಕ ಎಸ್.ಆರ್.ಶ್ರೀನಿವಾಸ್ ನೀಡಿದ್ದಾರೆ. 

ತಿಟಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀ‌ನಿವಾಸ್‌ ಸ್ಪೋಟಕ‌ ಹೇಳಿಕೆಯೊಂದನ್ನು ನೀಡಿದ್ದು,ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರದ ಭಾಷಣದ ವೇಳೆ ಅವರು ಸಿಎಂ ರಾಜೀನಾಮೆ ಬಗ್ಗೆ ಮಾತನಾಡಿದ್ದಾರೆ.

ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸಲಿಲ್ಲ ಅಂದ್ರೆ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ. ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯನನ್ನು ಉಳಿಸುವ ಕೆಲಸ ನಾವೆಲ್ಲ ಮಾಡಬೇಕು ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯನನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

 

RELATED ARTICLES

Related Articles

TRENDING ARTICLES