Friday, May 10, 2024

KPCCಗೆ ಮೇಜರ್ ಸರ್ಜರಿ : ಐವರು ನೂತನ ಕಾಂಗ್ರೆಸ್ ಕಾರ್ಯಾಧ್ಯಕ್ಷರ ನೇಮಕ

ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಲ್ಲಿ ಕೆಪಿಸಿಸಿಗೆ ಎಐಸಿಸಿ ಮೇಜರ್‌ ಸರ್ಜರಿ ಮಾಡಲಾಗಿದೆ. ಐವರು ನಾಯಕರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಿಸಿದೆ.

ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್,​​ ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ನೇಮಕ ಮಾಡಲಾಗಿದೆ.

ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ಅವರನ್ನು ನೇಮಕ ಮಾಡಲಾಗಿದೆ. ರಿಜ್ವಾನ್ ಅರ್ಷದ್ ಅವರನ್ನು ಉಪಾಧ್ಯಕ್ಷರನ್ನಾಗಿ ಹಾಗೂ ಎಲ್. ಹನುಮಂತಯ್ಯ ಅವರನ್ನು ಸಹ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸಮುದಾಯವಾರು ಕಾರ್ಯಾಧ್ಯಕ್ಷರ ನೇಮಕ

ಸಚಿವರಾದ ರಾಮಲಿಂಗಾರೆಡ್ಡಿ ಜಾಗಕ್ಕೆ ಜಿ.ಸಿ. ಚಂದ್ರಶೇಖರ್, ಈಶ್ವರ್ ಖಂಡ್ರೆ ಅವರ ಜಾಗಕ್ಕೆ ವಿನಯ್ ಕುಲಕರ್ಣಿ, ಸಲೀಂ ಅಹ್ಮದ್ ಜಾಗಕ್ಕೆ ತನ್ವೀರ್ ಸೇಠ್, ಒಬಿಸಿ ಸಮುದಾಯದಿಂದ ಮಂಜುನಾಥ್ ಭಂಡಾರಿ, ಬಿ.ಎನ್.ಚಂದ್ರಪ್ಪ ಜಾಗಕ್ಕೆ ವಸಂತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅಭಿನಂದನೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರುಗಳಾಗಿ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸಹಾಧ್ಯಕ್ಷರಾಗಿ ಆಯ್ಕೆಯಾಗಿರುವ ಪಕ್ಷದ ಎಲ್ಲ ನಾಯಕರಿಗೆ ಅಭಿನಂದನೆಗಳು. ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ನಾವೆಲ್ಲರೂ ಜೊತೆಗೂಡಿ ಶ್ರಮಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES

Related Articles

TRENDING ARTICLES