Sunday, May 19, 2024

25 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್

ಮಂಗಳೂರು : 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮುಡಾ ಆಯುಕ್ತ ಮನ್ಸೂರ್ ಅಲಿ ಟಿಡಿಆರ್​ ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಡಿವೈಎಸ್​ಪಿ ಚೆಲುವರಾಜ್, ಇನ್ಸ್ಪೆಕ್ಟರ್​ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳು ದಿಢೀರ್​ ದಾಳಿ ಮಾಡಿ, ಆಯುಕ್ತ ಮನ್ಸೂರ್​ ಅಲಿಯನ್ನು ರೆಡ್​ ಆ್ಯಂಡ್​ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ.

ಆಯುಕ್ತ ಮನ್ಸೂರ್​ ಅಲಿ ಜೊತೆ ಬ್ರೋಕರ್ ಸಲೀಂ ಎಂಬುವವರನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES