Wednesday, May 15, 2024

ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ : ವರ್ಷದ ಬಳಿಕ ಮೈದಾನಕ್ಕೆ ‘ಪಂತ್’ ಎಂಟ್ರಿ

ಬೆಂಗಳೂರು : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಇಂದು ಐಪಿಎಲ್ 17ನೇ ಆವೃತ್ತಿಯ ಮೊದಲ ಡಬಲ್ ಹೆಡರ್. ಮೊದಲ ಪಂದ್ಯದಲ್ಲಿ ಪಂಜಾಬ್ ಮತ್ತು ಡೆಲ್ಲಿ ಕಾದಾಡಲಿವೆ.

ಭಾರತದ ಸ್ಟಾರ್ ಬ್ಯಾಟರ್ ರಿಷಭ್ ಪಂತ್​ 1 ವರ್ಷ 2 ತಿಂಗಳ ರಿಹಾಬ್ ಹಾಗೂ ರಿಕವರಿ ಪ್ರಕ್ರಿಯೆಯ ನಂತರ ಕ್ರಿಕೆಟ್ ಮೈದಾನಕ್ಕೆ ಇಳಿಯುತ್ತಿದ್ದಾರೆ. 2022ರ ಡಿಸೆಂಬರ್ 30ರಂದು ಉತ್ತರಖಂಡದ ರೂರ್ಕಿ ಬಳಿ ಭೀಕರ ಕಾರು ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್

ರಿಷಬ್ ಪಂತ್(ನಾಯಕ / ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶಾಯ್ ಹೋಪ್, ರಿಕಿ ಭುಯಿ, ಟ್ರಿಸ್ಟಾನ್ ಸ್ಟಬ್ಸ್​, ಅಕ್ಷರ್ ಪಟೇಲ್, ಸುಮಿತ್, ಕುಲ್​ದೀಪ್ ಯಾದವ್, ಖಲೀಲ್, ಇಶಾಂತ್ ಶರ್ಮಾ.

ಪಂಜಾಬ್ ಕಿಂಗ್ಸ್

ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್, ಅರ್ಶ್‌ದೀಪ್ ಸಿಂಗ್, ಶಶಾಂಕ್ ಸಿಂಗ್.

RELATED ARTICLES

Related Articles

TRENDING ARTICLES