ನವದೆಹಲಿ : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ 4 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ.
ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಮಾಜಿ ಸಚಿವ ಡಾ.ಕೆ. ಸುಧಾಕರ್ ಪಾಲಾಗಿದೆ. ಉತ್ತರ ಕನ್ನಡದಲ್ಲಿ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಲಾಗಿದೆ.
ಇನ್ನೂ ರಾಯಚೂರಿನ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಮತ್ತೊಮ್ಮೆ ಮಣೆ ಹಾಕಲಾಗಿದೆ. ತೀವ್ರ ವಿರೋಧದ ನಡುವೆ ನಿರೀಕ್ಷೆಯಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಲಾಗಿದೆ. ಇನ್ನೂ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಿಸಿಲ್ಲ.
ಎಲ್ಲಿಂದ ಯಾರು ಸ್ಪರ್ಧೆ?
- ರಾಯಚೂರು ಲೋಕಸಭಾ ಕ್ಷೇತ್ರ : ರಾಜಾ ಅಮರೇಶ್ವರ ನಾಯಕ
- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ : ಡಾ.ಕೆ.ಸುಧಾಕರ್
- ಉತ್ತರ ಕನ್ನಡ ಲೋಕಸಭಾ ಕ್ಷೇತ್ರ : ವಿಶ್ವೇಶ್ವರ ಹೆಗಡೆ ಕಾಗೇರಿ
- ಬೆಳಗಾವಿ ಲೋಕಸಭಾ ಕ್ಷೇತ್ರ : ಜಗದೀಶ್ ಶೆಟ್ಟರ್
BJP releases 5th list of candidates for the upcoming Lok Sabha elections.
Nityanand Rai to contest from Ujiarpur.
Giriraj Singh from Begusarai.
Ravi Shankar Prasad from Patna Sahib.
Kangana Ranaut from Mandi.
Naveen Jindal from Kurukshetra.
Sita Soren from Dumka.
Jagadish… pic.twitter.com/xQOR2BDpA0— ANI (@ANI) March 24, 2024