ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗು ಮುಖಂಡರಿಗೆ ಅವರ ರಾಜಕೀಯ ಭವಿಷ್ಯದ ಬಗ್ಗೆ ಈ ಹಿಂದೆಯೇ ಕಾಲಜ್ಞಾನ ಮಠದ ಶ್ರೀಗಳಾದ ಸಿದ್ದಲಿಂಗಸ್ವಾಮಿಗಳು ಭವಿಷ್ಯಗಳು ನುಡಿದಂತೆ ನಡೆದಿದ್ದು ಮುಂದಿನ ದಿನಗಳಲ್ಲಿ ಎಚ್ಚರಿಕೆಯ ನಡೆ ಇಡುವಂತೆ ಸಲಹೆ ನೀಡಿದ್ದಾರೆ.
ಕಳೆದ ಕೆಲದಿನಗಳ ಹಿಂದೆ ಸಿದ್ದಲಿಂಗೇಶ್ವರ ಗದ್ದುಗೆ ಮಠದ (ಶ್ರೀ ಕಾಲಜ್ಞಾನ ಮಠದ ಶ್ರೀಗಳು) ಶ್ರೀಗಳಾದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ಉತ್ತರ ಭಾರತದ ರಾಜ್ಯಗಳಲ್ಲಿ ಒಂದಾದ ಹಿಮಾಚಲ ಪ್ರದೇಶದ ಸರ್ಕಾರಕ್ಕೆ ಬಹು ದೊಡ್ಡ ಕಂಟಕ ಎದುರಾಗಲಿದೆ. ಇದರಿಂದ ಮುಖ್ಯಮಂತ್ರಿಗಳೇ ನಿಮ್ಮ ಅಧಿಕಾರ ಪಥನವಾಗಲಿದೆ ಮತ್ತು ನೂತನ ಸರ್ಕಾರ ಹಿಮಾಚಲ ಪ್ರದೇಶವನ್ನು ಮುನ್ನಡೆಸುತ್ತದೆ ಎಂದು ಭವಿಷ್ಯ ನುಡಿದಿದ್ದರು. ಇದೀಗ ಈ ಭವಿಷ್ಯವು ನಿಜವಾಗಿದ್ದು ಶ್ರೀಗಳು ಎಚ್ಚರಿಕೆಯಂತೆ ನೀಡಿದಂತೆ ನಡೆದಿದೆ.
ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಬದಲಾವಣೆ:
ಹಿಮಾಚಲ ಪ್ರದೇಶದಲ್ಲಿ ಅಧಿಕಾರದಲ್ಲಿದ್ದರೂ ರಾಜ್ಯಸಭಾ ಚುನಾವಣೆಯಲ್ಲಿ ಏಕೈಕ ಸೀಟನ್ನು ಗೆಲ್ಲಿಸಿ ಕೊಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದರು. ಆದರೆ ರಾಜ್ಯಸಭಾ ಚುನಾವಣೆಯಲ್ಲಿ ಆರು ಶಾಸಕರು ಅಡ್ಡ ಮತದಾನ ಮಾಡಿದ್ದರು. ಹೀಗಾಗಿ ವಿಶ್ವಾಸಮತ ಸಾಬೀತುಪಡಿಸಲೂ ವಿಫಲವಾಗಬಹುದು ಎಂಬ ಸಾಧ್ಯತೆ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಮೊದಲೇ ಸಿಎಂ ರಾಜೀನಾಮೆ ನೀಡಿದ್ದಾರೆ.