ಬೆಂಗಳೂರು : ಮಂಡ್ಯ ಕ್ಷೇತ್ರದಲ್ಲಿ ಹೆಚ್ ಡಿಕೆ ಸ್ಪರ್ಧೆ ವಿಚಾರವಾಗಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ನಮ್ಮ ಕುಟುಂಬದಿಂದ ಯಾರೂ ಕೂಡ ಸ್ಪರ್ಧೆ ಮಾಡುವುದು ಬೇಡ ಎಂದಿಕೊಂಡಿದ್ದೆವು. ಆದರೇ, ಮಂಡ್ಯ ಕ್ಷೇತ್ರದಲ್ಲಿ ತಂದೆಯವರೇ ನಿಲ್ಲಬೇಕು ಎಂದು ಇಲ್ಲಿನ ಕಾರ್ಯಕರ್ತರು ಹಾಗು ಮುಖಂಡರು ಒತ್ತಡ ಹಾಕುತ್ತಿದ್ದಾರೆ.
ಇದನ್ನೂ ಓದಿ: ಈಶ್ವರಪ್ಪ ನಿಮಗೆ ಗಂಡಸ್ತನ ಇಲ್ವಾ? : ಸಚಿವ ಮಧು ಬಂಗಾರಪ್ಪ
ಅಷ್ಟೆ ಅಲ್ಲದೇ 2019 ರ ಲೋಕಸಭಾ ಚುನಾವಣೆಯಲ್ಲಿ ನಾನು ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ದೆ. ಚುನಾವಣೆಯಲ್ಲಿ ಕುತಂತ್ರದಿಂದ ಸೋಲಿಸಿದರು. ಕೆಲವೊಂದು ಚಿತಾವಣೆಯಿಂದಲೇ ನಾನು ಸೋತಿದ್ದರಿಂದ ಈ ಬಾರಿ ಚುನಾವಣೆಯಲ್ಲಿ ಮತ್ತೆ ನನ್ನನ್ನು ಸ್ಪರ್ಧೆ ಮಾಡುವಂತೆ ಹೇಳುತ್ತಿದ್ದಾರೆ. ಕಳೆದ ಬಾರಿ ಸೋತಿದ್ದರೇನು ಈ ಬಾರಿ ಗೆಲ್ಲಸುತ್ತೇವೆ ಎಂದು ಹೇಳುತ್ತಿದ್ದಾರೆ.
ಮಂಡ್ಯ ಲೋಕಸಭ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವ ಕುರಿತು ನಾಳೆ ಚನ್ನಪಟ್ಟಣದಲ್ಲಿ ನಡೆಯಲಿರುವ ಕಾರ್ಯಕರ್ತರ ಸಭೆಯ ಬಳಿಕ ತಂದೆವರು ವಿಚಾರ ತಿಳಿಸಲಿದ್ದಾರೆ ಎಂದು ಅವರು ಹೇಳಿದರು.