ಬೆಂಗಳೂರು: ಹೃದಯ ಚಿಕಿತ್ಸೆ ಮುಗಿಸಿ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಕುಮಾರಸ್ವಾಮಿ ಕಿಡಿಕಾಡಿದ್ದಾರೆ. ಸಿದ್ದರಾಮಯ್ಯ ಡ್ರಾಮ ಮಾಡೋದನ್ನು ಬಿಟ್ಟು ಕೆಲಸ ಮಾಡಬೇಕು ಎಂದಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಚನ್ನೈಗೆ ತೆರಳಿದ್ದ ಕುಮಾರಸ್ವಾಮಿಯವರು ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಇಂದು ಬೆಂಗಳೂರಿಗೆ ಆಗಮಿಸಿ ಮಾದ್ಯಮ ಪ್ರತಿಕ್ರಿಯೆ ನೀಡಿದರು. ದೇವರ ದಯೆಯಿಂದ ಈ ರಾಜ್ಯದ ಜನತೆಯ ಆಶೀರ್ವಾದದಿಂದ ಮೂರನೇ ಬಾರಿ ಯಶಸ್ವಿಯಗಿ ಹೃದಯ ಚಿಕಿತ್ಸೆಯ ಮುಗಿಸಿಕೊಂಡು ಬಂದಿದ್ದೇನೆ ಎಂದರು.
ಇದನ್ನೂ ಓದಿ: ನಾಳೆಯಿಂದ ರಾಜ್ಯದಲ್ಲಿ SSLC ಪರೀಕ್ಷೆ ಆರಂಭ
ಇನ್ನು ಮೂರ್ನಾಲ್ಕು ದಿನಗಳ ಬಳಿಕ ಮುಂದಿನ 25 ದಿನಗಳ ಕಾಲ ರಾಜ್ಯದ ಎನ್ಡಿಎ ಆಭ್ಯರ್ಥಿಗಳ ಗೆಲುವಿಗಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ. ಮಂಡ್ಯದಿಂದ ತಾವೇ ಅಭ್ಯರ್ಥಿ ಎನ್ನುವ ಮಾತಿಗೆ ಇನ್ನು ಎರಡು ಮೂರು ದಿನಗಳಲ್ಲಿ ತಿಳಿಸುತ್ತೇನೆ ಎಂದರು.
ರಾಜ್ಯದಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ವಿರುದ್ದ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೊರೆ ಹೊರೆಟಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅದೆಲ್ಲ ಸ್ಟಂಟ್ ಅಷ್ಟೆ, ನಮ್ಮ ದುಡ್ಡು ನಮ್ಮ ತೆರಿಗೆ , ನಮ್ಮ ಹಕ್ಕು ಇವೆಲ್ಲಾ ಡ್ರಾಮ ಮಾಡುವುದನ್ನು ಬಿಟ್ಟು ಮೊದಲು ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.