Friday, September 20, 2024

ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ : ಮೋದಿ ಕ್ರೀಡಾಂಗಣದಲ್ಲಿ ಮದಗಜಗಳ ಕಾಳಗ

ಬೆಂಗಳೂರು : ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್​ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್​ 17ನೇ ಆವೃತ್ತಿಯ 5ನೇ ಪಂದ್ಯ ನಡೆಯುತ್ತಿದೆ. ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಇಂದು ತನ್ನ ಮೊದಲ ಪಂದ್ಯ ಆಡುತ್ತಿದೆ.

ಐಪಿಎಲ್‌ನಲ್ಲಿ ಒಂದು ಕಡೆ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ಗೆ ನಾಯಕರಾಗಿದ್ದರೆ, ಮತ್ತೊಂದೆಡೆ ಶುಭಮನ್ ಗಿಲ್ ಗುಜರಾತ್ ಟೈಟಾನ್ಸ್‌ಗೆ ಮೊದಲ ಬಾರಿಗೆ ನಾಯಕರಾಗಿದ್ದಾರೆ. ಇಬ್ಬರೂ ನಾಯಕರು ಗೆಲುವಿನ ಸಿಹಿಯೊಂದಿಗೆ ಟೂರ್ನಿ ಆರಂಭಿಸಲು ರಣತಂತ್ರ ರೂಪಿಸಿದ್ದಾರೆ.

ಮುಂಬೈ ಇಂಡಿಯನ್ಸ್

ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ನಮನ್ ಧೀರ್, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಜೆರಾಲ್ಡ್ ಕೋಟ್ಜಿ, ಜಸ್ಪ್ರೀತ್ ಬುಮ್ರಾ, ಲ್ಯೂಕ್ ವುಡ್

ಗುಜರಾತ್ ಟೈಟಾನ್ಸ್

ಶುಭಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ಸಾಯಿ ಕಿಶೋರ್, ಸ್ಪೆನ್ಸರ್ ಜಾನ್ಸನ್

RELATED ARTICLES

Related Articles

TRENDING ARTICLES