ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ವ್ಯಕ್ತಿಯೊಬ್ಬನನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಾರ್ಚ್ 24ರಂದು ಭಾನುವಾರ ಬೆಳಗ್ಗೆ ನಡೆದಿದ್ದು ಈ ದಾರುಣ ಘಟನೆಯಿಂದ ಚಿಕ್ಕಬಳ್ಳಾಪುರ ಜನರನ್ನು ಬೆಚ್ಚಿ ಬಿದ್ದಿದ್ದಾರೆ.
ಆಂದ್ರಪ್ರದೇಶದ ದೇಮಕೇತಪಲ್ಲಿ ನಿವಾಸಿ ವೆಂಕಟೇಶಪ್ಪ (55) ಕೊಲೆಯಾದ ದುರ್ದೈವಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಟಿಬಿ ಕ್ರಾಸ್ ಬಳಿ ಇರುವ ಶ್ರೀ ಚೌಡೇಶ್ವರಿ ಹೋಟೆಲ್ ಬಳಿ ಕೊಲೆ ನಡೆದಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಕಲಬುರಗಿ: 1.5 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ
ಇನ್ನು, ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಎಸ್ಪಿ ನಾಗೇಶ್ ನೇತೃತ್ವದಲ್ಲಿ ಬಾಗೇಪಲ್ಲಿ ಪೋಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.