Sunday, May 12, 2024

ಕತ್ತು ಸೀಳಿ ವ್ಯಕ್ತಿಯ ಕೊಲೆ!

ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ವ್ಯಕ್ತಿಯೊಬ್ಬನನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಾರ್ಚ್ 24ರಂದು ಭಾನುವಾರ ಬೆಳಗ್ಗೆ ನಡೆದಿದ್ದು ಈ ದಾರುಣ ಘಟನೆಯಿಂದ ಚಿಕ್ಕಬಳ್ಳಾಪುರ ಜನರನ್ನು ಬೆಚ್ಚಿ ಬಿದ್ದಿದ್ದಾರೆ.

ಆಂದ್ರಪ್ರದೇಶದ ದೇಮಕೇತಪಲ್ಲಿ ನಿವಾಸಿ ವೆಂಕಟೇಶಪ್ಪ (55) ಕೊಲೆಯಾದ ದುರ್ದೈವಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಟಿಬಿ ಕ್ರಾಸ್​ ಬಳಿ ಇರುವ ಶ್ರೀ ಚೌಡೇಶ್ವರಿ ಹೋಟೆಲ್ ಬಳಿ ಕೊಲೆ ನಡೆದಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: ಕಲಬುರಗಿ: 1.5 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

ಇನ್ನು, ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಎಸ್ಪಿ ನಾಗೇಶ್​ ನೇತೃತ್ವದಲ್ಲಿ ಬಾಗೇಪಲ್ಲಿ ಪೋಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES