Sunday, May 5, 2024

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು KSRTC ಬಸ್​ ಚಾಲಕ ಆತ್ಮಹತ್ಯೆಗೆ ಯತ್ನ!

ಶಿವಮೊಗ್ಗ : ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್​ ಕಂ ಡ್ರೈವರ್​ ಬಸ್​ನಲ್ಲೇ ವಿಶ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಕೆಎಸ್ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ.

ಬಸವರಾಜ್​ (38), ಆತ್ಮಹತ್ಯೆಗೆ ಯತ್ನಿಸಿದ ಚಾಲಕ, ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಡ್ರಾಮಾ ಬಿಟ್ಟು ಕೆಲಸ ಮಾಡಿ : ಆಸ್ಪತ್ರೆಯಿಂದ ಬರುತ್ತಿದ್ದಂತೆ ಸಿದ್ದರಾಮಯ್ಯ ವಿರುದ್ದ ಗುಡುಗಿದ HDK

ಕಳೆದ ಹತ್ತು ವರ್ಷಗಳಿಂದ ಜಿಲ್ಲೆಯ ಹೊನ್ನಾಳಿ ಡಿಪೋದಲ್ಲಿ ಚಾಲಕ ಕಂ, ಡ್ರೈವರ್​ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಸವರಾಜ್ ವಿರುದ್ದ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಅಧಿಕಾರಿಗಳು ಬಸವರಾಜನನ್ನು ಕಚೇರಿಗೆ ಕರೆಸಿಕೊಂಡಿದ್ದರು ಇದಾದ ಬಳಿಕ ಮನನೊಂದ ಚಾಲಕ ಬಸ್​ ನಲ್ಲೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

RELATED ARTICLES

Related Articles

TRENDING ARTICLES