ಮಂಡ್ಯ: ಪಟಾಕಿ ಸ್ಫೋಟಗೊಂಡು ಒಬ್ಬ ಕಾರ್ಮಿಕ ಸಾವು, ಮತ್ತಿಬ್ಬರಿಗೆ
ಗಂಭೀರ ಗಾಯಗೊಂಡಿರುವ ದುರ್ಘಟನೆ ಮಂಡ್ಯ ತಾಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ನಡದಿದೆ.
ತಮಿಳುನಾಡು ಮೂಲದ ರಮೇಶ್ (67) ಮೃತ ದುರ್ದೈವಿ.ನಾಗಲಿಂಗ ಎಂಬ ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು,ಗಾಯಗೊಂಡವರನ್ನ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯ ವಿವರ
ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು.
ನೆನ್ನೆ ರಾತ್ರಿ ಗ್ರಾಮದಲ್ಲಿ ಅದ್ದೂರಿಯಾಗಿ ಹಬ್ಬ ಕೂಡ ನೆರವೇರಿದೆ.ಗ್ರಾಮದ ಆಲೆಮನೆಯೊಂದರಲ್ಲಿ ತಂಗಿದ್ದ ನಾಲ್ವರು ಇಂದು ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳ ತುಂಬುವಾಗ ಪಟಾಕಿ ಸ್ಪೋಟಗೊಂಡಿವೆ.
ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿವೆ.
ಹೊತ್ತಿಉರಿದ ಆಲೆಮನೆ
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡಿದ್ದಾರೆ. ಸ್ಥಳಕ್ಕೆ ಡಿಸಿ ಡಾ ಕುಮಾರ್, ಎಸ್ ಪಿ ಯತೀಶ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.ಕೆರೆಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.