Monday, May 20, 2024

ಸುರಪುರ ಉಪಚುನಾವಣೆ : ಮಾಜಿ ಶಾಸಕ ರಾಜುಗೌಡಗೆ ಬಿಜೆಪಿ ಟಿಕೆಟ್

ಬೆಂಗಳೂರು : ಸುರಪುರ ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗಿದೆ.

ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ರಾಜುಗೌಡಗೆ ಮತ್ತೆ ಉಪಚುನಾವಣೆಯ ಟಿಕೆಟ್ ನಿಡಲಾಗಿದೆ. ಕಾಂಗ್ರೆಸ್​ ಪಕ್ಷದಿಂದ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್​ ಅವರಿಗೆ ಟಿಕೆಟ್ ನೀಡಲಾಗಿದೆ.

ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರು ಅಕಾಲಿಕವಾಗಿ ನಿಧನರಾದ ಹಿನ್ನೆಲೆ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

25,223 ಮತಗಳ ಅಂತರದಲ್ಲಿ ಗೆಲುವು

ರಾಜಾ ವೆಂಕಟಪ್ಪ ನಾಯಕ್ ಅವರು ಕಳೆದ ಬಾರಿ 1,13,559 ಮತಗಳನ್ನು ಪಡೆದಿದ್ದರು. ಪ್ರತಿಸ್ಪರ್ಧಿ ರಾಜುಗೌಡ (ನರಸಿಂಹ ನಾಯಕ) 88,336 ಮತ ಪಡೆದಿದ್ದರು. 25,223 ಮತಗಳ ಅಂತರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದರು.

ಈ ಸುದ್ದಿ ಓದಿದ್ದೀರಾ? : ‘ನಿನ್ನಂಥ ಅಪ್ಪ ಇಲ್ಲ’ : ರಾಜ್ಯದ ಐವರು ಸಚಿವರ ಮಕ್ಕಳಿಗೆ ಬಂಪರ್

ಅಂಗಾಂಗ ವೈಫಲ್ಯದಿಂದ ನಿಧನ

ಬಹು ಅಂಗಾಂಗ ವೈಫಲ್ಯ (ಹೃದಯಾಘಾತ)ದಿಂದ ರಾಜಾ ವೆಂಕಟಪ್ಪ ನಾಯಕ್ ಅವರು ನಿಧನರಾಗಿದ್ದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಯಕ ವೆಂಕಟಪ್ಪ ನಾಯಕ ಅವರು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

RELATED ARTICLES

Related Articles

TRENDING ARTICLES