ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರನ್ನು ಗೆಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪಣ ತೊಟ್ಟಿದ್ದಾರೆ.
ಮೂರು ದಿನಗಳಿಂದ ಮೈಸೂರಿನಲ್ಲೇ ಮೊಕ್ಕಾಂ ಹೂಡಿರುವ ಸಿದ್ದರಾಮಯ್ಯ ಸ್ಥಳೀಯ ನಾಯಕರ ಜೊತೆ ಮಾತುಕತೆ ನಡೆಸಿ ರಣತಂತ್ರ ರೂಪಿಸುತ್ತಿದ್ದಾರೆ. ಇದೇ ವೇಳೆ, ಮೈಸೂರಿನ ರೆಸಾರ್ಟ್ನಲ್ಲಿ ಕುಳಿತುಕೊಂಡೇ ‘ಆಪರೇಷನ್ ಹಸ್ತ’ಕ್ಕೆ ಮುಂದಾಗಿದ್ದಾರೆ.
ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಆಪ್ತರಿಗೆ ಸಿಎಂ ಸಿದ್ದರಾಮಯ್ಯ ಗಾಳ ಹಾಕಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಆಪ್ತ ಹೆಚ್.ವಿ. ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಸಿದ್ದರಾಮಯ್ಯ ಗಾಳ ಹಾಕಿದ್ದಾರೆ.
ಈ ಸುದ್ದಿ ಓದಿದ್ದೀರಾ? : ನನ್ನ ಹೆಂಡ್ತಿ ಸರಿಯಾಗಿ ಕೆಲಸ ಮಾಡದಿದ್ರೆ ನನ್ನ ಹೆಸರನ್ನೇ ಚೇಂಜ್ ಮಾಡ್ತೇನೆ : ಶಿವಣ್ಣ
ವೀರಶೈವ ಮತಗಳ ಕ್ರೋಢೀಕರಣ
ವರುಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದ್ದಾರೆ. ಈ ಹಿಂದೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೆನ್ನಿಗೆ ನಿಂತಿದ್ದ ಸದಾನಂದರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಸಿದ್ದರಾಮಯ್ಯ ಬಹುತೇಕ ಯಶಸ್ವಿಯಾಗಿದ್ದಾರೆ. ಸದಾನಂದ ವೀರಶೈವ ಸಮುದಾಯದ ಮುಖಂಡ ಸಹ ಆಗಿದ್ದು, ಅವರನ್ನು ಸೆಳೆಯುವ ಮೂಲಕ ವೀರಶೈವ ಮತಗಳ ಕ್ರೋಢೀಕರಣಕ್ಕೂ ಸಿದ್ದರಾಮಯ್ಯ ಯೋಜನೆ ರೂಪಿಸಿದ್ದಾರೆ.