Saturday, May 4, 2024

ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ ಹೇಳಿಕೆ: ಸಚಿವ ಶಿವರಾಜ್​ ತಂಗಡಗಿ ವಿರುದ್ದ ಬಿಜೆಪಿ ಪ್ರತಿಭಟನೆ!

ಚಿಕ್ಕಮಗಳೂರು : ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವ ಸಚಿವ ಶಿವರಾಜ್​ ತಂಗಡಗಿ ಹೇಳಿಕೆ ವಿರುದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕೊಪ್ಫಳದ ಕಾರಟಗಿಯಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವಾಗ ಸಚಿವ ಶಿವರಾಜ್ ತಂಗಡಗಿಯವರು ಮೋದಿ ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ ಎನ್ನುವ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮೋದಿ ಪೋಸ್ಟರ್ ಹಿಡುದು ಪ್ರತಿಭಟನೆ ನಡೆಸಿದರು.

ಇದನ್ನು ಓದಿ: ‘ಮೋದಿ.. ಮೋದಿ..’ ಎನ್ನುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡಿಬೇಕು : ಸಚಿವ ಶಿವರಾಜ ತಂಗಡಗಿ

ಲೋಕಸಭಾ ಚುನಾವಣೆ ಹಿನ್ನೆಲೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಕೆಜೆ ಜಾರ್ಜ್ ಸೇರಿದಂತೆ ಐವರು ಶಾಸಕರು ಇಂದು ಚಿಕ್ಕಮಗಳೂರು ಖಾಸಗಿ ಹೋಟೆಲ್​ಗೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್​ ವಿರುದ್ದ ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು. ಮೋದಿ ಫೋಟೊ ಹಿಡಿದು ಮೋದಿ ಪರ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಸಚಿವರಿಗೆ ಬಿಸಿ ಮುಟ್ಟಿಸಲು ಬಂದ 15ಕ್ಕೂ ಹೆಚ್ಚು ಹಿಂದುಪರ ಕಾರ್ಯಕರ್ತರನ್ನು  ಪೊಲೀಸರು ಬಂಧಿಸಿದರು. ಇದೇ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ಮಾತಿನ ಚಕಮಕಿ ನಡೆಯಿತು.

RELATED ARTICLES

Related Articles

TRENDING ARTICLES