Monday, May 20, 2024

ಸುಮಲತಾಗೆ ಬೇರೆ ಅವಕಾಶ ಇದೆ, ಸಮಾಧಾನದಿಂದ ಇದ್ರೆ ಮುಂದೆ ಅವಕಾಶ ಸಿಗುತ್ತೆ : ಯಡಿಯೂರಪ್ಪ ಭರವಸೆ

ಬೆಳಗಾವಿ : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬೇರೆ ಅವಕಾಶ ಇದೆ. ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಸ್ಪರ್ಧೆ ಬಹುತೇಕ ನಿಶ್ಚಯ ಆಗಿದೆ ಎಂದು ಹೇಳಿದರು.

ಬೆಳಗಾವಿಯಲ್ಲಿ ಮಾಜಿ ಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಸಭೆ ಮಾಡಲಾಗುತ್ತಿದೆ. ಎಲ್ಲರೂ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲಿಸಬೇಕು ಎಂಬುದು ನಮ್ಮ ಗುರಿ ಎಂದು ತಿಳಿಸಿದರು.

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಗೌರವ ತರಲ್ಲ

ಪ್ರಧಾನಿ ಮೋದಿ ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು ನೀಡಿದರು. ಸಿಎಂ ಸಿದ್ದರಾಮಯ್ಯರಿಗೆ ಮೋದಿ ಬಗ್ಗೆ ಮಾತನಾಡಿದ್ರೆ ದೊಡ್ಡವರು ಆಗುತ್ತೇನೆ ಎಂಬ ಭ್ರಮೆ ಇದೆ. ಇಂತಹ ಮಾತು ಕಡಿಮೆ ಮಾಡಿ, ಸಿಎಂ ಸ್ಥಾನಕ್ಕೆ ಗೌರವ ತರಲ್ಲ. ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಆಗ್ತಿದೆ ಎಂಬ ಕಾಂಗ್ರೆಸ್​ ಆರೋಪ ಸತ್ಯಕ್ಕೆ ದೂರವಾದದ್ದು. ಹಣಕಾಸಿನ ಬಗ್ಗೆ ನಿರ್ಮಲಾ ಸೀತಾರಾಮ್ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.

ಶಿವರಾಜ್ ತಂಗಡಗಿಗೆ ಇದು ಶೋಭೆ ತರಲ್ಲ

ಪ್ರಧಾನಿ ಮೋದಿ ಹೆಸರು ಹೇಳಿ ವೋಟು ಕೇಳಿದ್ರೆ ಕಪಾಳಮೋಕ್ಷ ಮಾಡಿ ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ಶಿವರಾಜ್ ತಂಗಡಗಿಗೆ ಇದು ಶೋಭೆ ತರಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರಲ್ಲ. ಇದು ಅತಿರೇಕದ ಪರಮಾವಧಿ. ಹಗುರವಾದ ಮಾತುಗಳನ್ನು ಆಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದರು.

RELATED ARTICLES

Related Articles

TRENDING ARTICLES