ಬೆಂಗಳೂರು : ನಾನು ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ, ಸಂಸತ್ತಿನಲ್ಲಿ ಹಿಂದಿ ಮಾತನಾಡಿ ಬರ್ತೀನಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಸವಾಲ್ ಹಾಕಿದರು.
ಕೋಟಾ ಶ್ರೀನಿವಾಸ್ ಪೂಜಾರಿಗೆ ಹಿಂದಿ ಬರಲ್ಲ ಎಂಬ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿಕೆಗೆ ತಿರುಗೇಟು ನೀಡಿದರು. ನನಗೆ ವಿವಾದ ಮಾಡೋಕೆ ಬರಲ್ಲ. ನನ್ನ ಬಗ್ಗೆ ಪ್ರೀತಿ ಇರೋರು ಹೇಳಿದ್ದಾರೆ. ಅವರು ಆತಂಕದಿಂದ ಹೇಳಿದ್ದಾರೆ ಎಂದು ಕುಟುಕಿದರು.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆ ಆಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಮಾಡಿರುವುದು ಅವರ ಗಮನಕ್ಕೆ ಇದೆ. ಉಡುಪಿ-ಚಿಕ್ಕಮಗಳೂರು ಬಗ್ಗೆ ಸಹಕಾರ ಕೋರಿದೆ ಎಂದರು.
ಕುಮಾರಸ್ವಾಮಿ ಪ್ರೀತಿಯಿಂದ ಮಾತನಾಡಿದ್ರು
ಕುಮಾರಸ್ವಾಮಿಯವರು ಪ್ರೀತಿಯಿಂದ ಮಾತನಾಡಿದ್ರು. ನಮ್ಮ ಪಕ್ಷ ನಿಮ್ಮ ಪರವಾಗಿದೆ. ನೀವು ಗೆಲ್ಲುತ್ತೀರಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕೆಲವು ಸಲಹೆ ನೀಡಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕುಮಾರಸ್ವಾಮಿ ಸೂಚನೆ ಮೇರೆಗೆ ಚಿಕ್ಕಮಗಳೂರು ಜೆಡಿಎಸ್ ಪಕ್ಷದ ಮುಖಂಡರು ಕೆಲಸ ಮಾಡ್ತಾ ಇದ್ದಾರೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಆತ್ಮೀಯ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದೆ. ಇತ್ತೀಚೆಗೆ ಹೃದಯಕ್ಕೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಈಗ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. 1/2 pic.twitter.com/g9MeOvD8F2
— Kota Shrinivas Poojari (ಮೋದಿಜೀ ಪರಿವಾರ) (@KotasBJP) March 27, 2024