ವಿಜಯಪುರ: ರಾಜ್ಯದ ಎಲ್ಲೆಡೆಯಂತೆ ವಿಜಯಪುರ ನಗರದಲ್ಲಿಯೂ ಆರ್.ಟಿ.ಒ ಅಧಿಕಾರಿ ಮನೆ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೌದು, ಆರ್ ಟಿ ಓ ನಿವಾಸದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ, ವಿದೇಶಿ ಕರೆನ್ಸಿ ಪತ್ತೆಯಾಗಿದೆ.
ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ, ವಿದೇಶಿ ಕರೆನ್ಸಿ ಪತ್ತೆ ಜಮಖಂಡಿಯಲ್ಲಿ ಆರ್ ಟಿ ಓ ಇನ್ಸ್ಪೆಕ್ಟರ್ ಆಗಿರೋ ಷಣ್ಮುಖಪ್ಪ ನಿವಾಸದ ಮೇಲೆ ರೇಡ್ ನಡೆದಿತ್ತು.ಅಮೆರಿಕನ್ ಡಾಲರ್, ಪೌಂಡ್, ನೇಪಾಳ, ಮಲೇಶಿಯಾ ಸೇರಿ ಹಲವು ದೇಶಗಳ ಕರೆನ್ಸಿಗಳು ಚಿನ್ನದ ನೆಕ್ಲೆಸ್, ಚಿನ್ನದ ಸರ, ಓಲೆ, ಬೆಳ್ಳಿಯ ಪಾತ್ರೆ ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣಗಳು ದಾಳಿ ಸಮಯದಲ್ಲಿ ಪತ್ತೆಯಾಗಿವೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ಅವರ ವಿಜಯಪುರ ನಗರದ ಚಾಲುಕ್ಯ ನಗರ ಬಡಾವಣೆಯಲ್ಲಿ ಇರುವ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಆರ್.ಟಿ.ಓ ಅಧಿಕಾರಿ ಷಣ್ಮುಖಪ್ಪ ನಿವಾಸ ಸೇರಿದಂತೆ ವಿಜಯಪುರ ನಗರದಲ್ಲಿರುವ ಅವರ ಸಂಬಂಧಿಕರ ನಿವಾಸಗಳ ಮೇಲೂ ದಾಳಿ ನಡೆಸಲಾಗಿದೆ.