Monday, May 13, 2024

ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ 20 ಸೀಟ್ ಗೆಲುತ್ತೇವೆ: ಡಿ.ಕೆ. ಶಿವಕುಮಾರ್​

ಮೈಸೂರು: ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ 20 ಸೀಟ್ ಗೆಲುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ. 

ಕಾಂಗ್ರೆಸ್​ ಸಮಾವೇಶದಲ್ಲಿ ಮಾತನಾಡಿದ ಅವರು,ಧರ್ಮ ಯುದ್ಧ ಪ್ರಾರಂಭ ಮಾಡುವ ಮುನ್ನ, ಅನೇಕ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದೆ.ನಾನು ಸಿಎಂ ಇಬ್ಬರು ಹೋಗಿ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಗೃಹಲಕ್ಷ್ಮಿ ಯೋಜನೆ ಹಣವನ್ನ ಮಹಿಳೆಯರಿಗೆ ತಲುಪಿಸುವ ಕೆಲಸ ಮಾಡಿದ್ದೇವೆ.ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಪ್ರಚಾರ ಕೈಗೊಂಡಿದ್ದೇವೆ. ತಾಯಿ ಚಾಮುಂಡಿ ಆಶೀರ್ವಾದ ಮಾಡಿದ್ದಕ್ಕೆ 135ಸ್ಥಾನ ಗೆದ್ದು ಅಧಿಕಾರ ನಡೆಸುತ್ತಿದ್ದೇವೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ 20 ಸೀಟ್ ಗೆಲ್ಲುತ್ತೆವೆ ಎಂದು ವಿಸ್ವಾಸ ವ್ಯಕ್ತಪಡಿಸಿದ್ದರು.

ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇತ್ತು. ಅವರು ಮಾಡಿದ ಆಡಳಿತವನ್ನ ಜನ ಮೆಚ್ಚಲಿಲ್ಲ.ಪ್ರಜಾಧ್ವನಿ, ಜನಧನಿ ಮೂಲಕ ನಾನು ಸಿಎಂ ಇಬ್ಬರು ಇಡಿ ರಾಜ್ಯ ಪ್ರವಾಸ ಮಾಡಿದ್ವಿ.ಗ್ಯಾರಂಟಿ ಯೋಜನೆಗಳನ್ನ ಯಾವುದೇ ಒಂದು ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ.ಬಿಜೆಪಿಯಿಂದ ಅನೇಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಒಂದು ದೊಡ್ಡ ಲಿಸ್ಟ್ ಗಳೇ ಇವೆ, ಸ್ವಲ್ಪ ದಿನಗಳ ಬಳಿಕ ಎಲ್ಲವನ್ನು ತಿಳಿಸುತ್ತೇನೆ ಎಂದರು.

ಬಿಜೆಪಿ ಅಭ್ಯರ್ಥಿ ಬಗ್ಗೆ ನಾನು ಟೀಕೆ ಮಾಡುವ ಅವಶ್ಯಕತೆ ಇಲ್ಲ.ನಮ್ಮ ಜೊತೆ ಇರುವಂತಹ ಅಭ್ಯರ್ಥಿ ಬೇಕು.
ನಮ್ಮ ಕಷ್ಟ, ಸಮಸ್ಯೆಗಳಿಗೆ ಸ್ಪಂದಿಸುವ ಅಭ್ಯರ್ಥಿ ಬೇಕು ಎಂದು ಹೇಳಿದ್ದರು.

RELATED ARTICLES

Related Articles

TRENDING ARTICLES