ಕಲಬುರಗಿ : ಪ್ರಧಾನಿ ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ‘ಕೈ’ಯಲ್ಲಿದೆ. ಮೋದಿ ಸುನಾಮಿ ದಕ್ಷಿಣದಲ್ಲಿ ಎಲ್ಲಿಯೂ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕುಟುಕಿದರು.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಅಂತ ಹೇಳ್ತಿರಲ್ಲ.. ನಮ್ಮಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅಂತ ಸ್ಪಷ್ಟವಾಗಿದೆ ಎಂದು ತಿರುಗೇಟು ನೀಡಿದರು.
ವಿಜಯೇಂದ್ರ ನಾಯಕತ್ವವನ್ನು ಅವರ ಪಕ್ಷದವರೇ ಒಪ್ಪಿಕೊಳ್ಳತ್ತಿಲ್ಲ. ಕಾಂಗ್ರೆಸ್ಗಿಂತ ಹೆಚ್ಚಿನ ಕುಟುಂಬ ರಾಜಕಾರಣ ಬಿಜೆಪಿಯಲ್ಲಿದೆ. ಡಿಎನ್ಎ ಟೆಸ್ಟ್ ಮಾಡಿಸೋಣ, ಯಾರ್ಯಾರು ಯಾರ ಕುಟಂಬದವರು ಅಂತ ಗೊತ್ತಾಗುತ್ತೆ. ವಿತ್ ಡಿಎನ್ಎ ಕಿಟ್ ಇಟ್ಟು ಚರ್ಚೆ ಮಾಡೋಣ ಬನ್ನಿ ಎಂದು ಸವಾಲ್ ಹಾಕಿದರು.
ಬಿಜೆಪಿ ಅವಧಿಯಲ್ಲೇ ಹೆಚ್ಚು ಭ್ರಷ್ಟಾಚಾರ
ಬಿಜೆಪಿಯವರು ಒಂದೇ ಕಟುಂಬ ಅಂತ ಹೇಳ್ತಿದ್ದಾರೆ. ಮೋದಿಯವರಿಗೆ ಸ್ಪೀಚ್ ಬರೆದುಕೋಡೊದೇ ವಾಟ್ಸ್ ಆಪ್ ಯೂನಿವರ್ಸಿಟಿ ಅವರು. ಅತಿ ಹೆಚ್ಚು ಭ್ರಷ್ಟಾಚಾರ ಆಗಿರೋದು ಬಿಜೆಪಿಯ ಅವಧಿಯಲ್ಲೇ. 40 ಪರ್ಸೆಂಟ್ ಸರ್ಕಾರ ಅಂತ ಬಿಜೆಪಿಯನ್ನ ಜನ ಕಿತ್ತೊಗೆದಿದ್ದಾರೆ ಎಂದು ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.