ಬೆಂಗಳೂರು ಗ್ರಾಮಾಂತರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆ ವಿಚಾರಕ್ಕೆ ಮಾಜಿ ಸಚಿವ ಹಾಗು ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪಾಪಾ ಇದೆಲ್ಲ ಎಸ್.ಆರ್ ವಿಶ್ವನಾಥ್ ಅವರ ವೈಯಕ್ತಿಕ ಅಭಿಪ್ರಾಯ, ಬಿಜೆಪಿ ವಿಶ್ವದಲ್ಲೆ ದೊಡ್ಡ ಕಾರ್ಯಕರ್ತರನ್ನು ಹೊಂದಿರುವಂತಹ ರಾಷ್ಟ್ರೀಯ ಪಕ್ಷ, ಹೈಕಮಾಂಡ್ ನವರು ಯೋಜಿತವಾಗಿ ತೀರ್ಮಾನ ಕೈಗೊಳ್ಳುತ್ತಾರೆ. ಇದೆಲ್ಲಾ ವೈಯಕ್ತಿಕ ಆಸೆ, ದುರಾಸೆಗಳಿಂದ ನೀಡುವ ವ್ಯಾಖ್ಯಾನ ಎಂದರು.
ಇದನ್ನೂ ಓದಿ: ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಗೊಂದಲ: ಹೆಚ್ಡಿಕೆಯಿಂದ ಕಾದು ನೋಡುವ ತಂತ್ರ
ಮಗನಿಗೆ ಟಿಕೆಟ್ ತಪ್ಪಿರುವುದಕ್ಕೆ ಬೇಜಾರು ಇರಬಹುದು, ಸಮಯ ಕೊಟ್ಟಾಗ ಎಸ್ ಆರ್ ವಿಶ್ವನಾಥ್ ಮನೆಗೆ ಭೇಟಿ ನೀಡುತ್ತೇನೆ, ಪಕ್ಷದ ಕಟ್ಟಾಳಾಗಿ ವರ್ತಿಸುತ್ತಾರೆ ಎನ್ನುವ ಆಶಾ ಭಾವನೆ ಇದೆ, ವಿಶ್ವನಾಥ್ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಸುಧಾಕರ್ ಪರ ಮತ ಕೇಳಲ್ಲ ಮತ್ತು ವೇದಿಕೆ ಹಂಚಿಕೊಳ್ಳಲ್ಲ ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ಇದೆಲ್ಲ ಮಾಮೂಲಿ ಎಂದು ಅವರು ಹೇಳಿದರು.