Saturday, April 27, 2024

ಕೋಲಾರ ಲೋಕಸಭಾ ಕ್ಷೇತ್ರ: ಚಿಕ್ಕಪೆದ್ದಣ್ಣ ಗೆ ಕುಮಾರಸ್ವಾಮಿ ಗಾಳ!

ಕೋಲಾರ : ಲೊಕಸಭಾ ಕ್ಷೇತ್ರದಲ್ಲಿ ಟಿಕೆಟ್​ ಫೈಟ್​ ತಾರಕ್ಕೇರಿದ್ದು ಸಚಿವ ಕೆ.ಹೆಚ್​ ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣಗೆ ಕಾಂಗ್ರೆಸ್​ ನಿಂದ ಟಿಕೆಟ್ ಸಿಗದಿದ್ದರೇ ಜೆಡಿಎಸ್​ ನಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಜೆಡಿಎಸ್​ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರದಿಂದ ಅಧಿಕೃತವಾಗಿ ತಮ್ಮ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡದೆ ಕಾಂಗ್ರೆಸ್​ ನ ಮುಂದಿನ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ನಡುವೆ ಕಾಂಗ್ರೆಸ್​ ಪಕ್ಷದಲ್ಲಿ  ಸಚಿವ ಮುನಿಯಪ್ಪ ಕುಟುಂಬಕ್ಕೆ ಕೋಲಾರ ಟಿಕೆಟ್​ ಘೋಷಣೆ ಮಾಡಬಾರದು ಎಂದು ಸ್ಥಳೀಯ ಶಾಸಕರು ಹಾಗು ಪರಿಷತ್​ ಸದಸ್ಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಕೋಲಾರ ಕಾಂಗ್ರೆಸ್​ ಅಭ್ಯರ್ಥಿ ಆಯ್ಕೆ ಗೊಂದಲ: ಹೆಚ್​ಡಿಕೆಯಿಂದ ಕಾದು ನೋಡುವ ತಂತ್ರ

ಈ ರಾಜಕೀಯ ಬೆಳವಣಿಗೆಗಳ ನಡುವೆ ಕಾಂಗ್ರೆಸ್​ ಮುಖಂಡ ರಮೇಶ್​ ಕುಮಾರ್​​ ಬಣದ ವಿರುದ್ದ ಕೆ.ಎಚ್ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಸೆಡ್ಡು ಹೊಡೆಯಲು ಸಿದ್ದರಾಗಿದ್ದಾರೆ. ಟಿಕೆಟ್​ ಕೊಡಲಿ ಬಿಡಲಿ ಕೋಲಾರದಿಂದ ಸ್ಪರ್ಧೆ ಖಚಿತ ಎನ್ನುವ ಮಾತುಗಳನ್ನು ಆಡುತ್ತಿದ್ದಾರೆ ಎನ್ನಲಾಗಿದೆ.

ಸಚಿವ ಕೆ.ಎಚ್ ಮುನಿಯಪ್ಪ ದಳಪತಿಗಳ ಜೊತೆಗೂ ಉತ್ತಮ ಬಾಂಧವ್ಯವನ್ನು ಹೊಂದಿದ್ದು ಚಿಕ್ಕಪೆದ್ದಣ್ಣ ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES