Monday, May 20, 2024

ಮತ್ತೊಮ್ಮೆ ಮೋದಿಯೇ ಪ್ರಧಾನಿ ಆಗುತ್ತಾರೆ‌ ಇದರಲ್ಲಿ ಅನುಮಾನವೇ ಬೇಡ : ಎಸ್.ಎಲ್.ಭೈರಪ್ಪ

ಮೈಸೂರು: ಮತ್ತೊಮ್ಮೆ ಮೋದಿಯೇ ಪ್ರಧಾನಿ ಆಗುತ್ತಾರೆ‌.ಇದರಲ್ಲಿ ಯಾವುದೇ ಅನುಮಾನವೇ ಬೇಡ ಎಂದು
ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಉತ್ತಮ ವಾತಾವರಣ ಇದೆ.ಕರ್ನಾಟಕದಲ್ಲಿ ಸ್ವಲ್ಪ ವೋಟು ಹೊಡೆದು ಹೋಗುತ್ತೆ. ಆದರೆ ಬಿಜೆಪಿ ಏನು ತೀರಾ ಸೋತು ಹೋಗಲ್ಲ.ಅರ್ಧಕ್ಕಿಂತ ಜಾಸ್ತಿ ಸೀಟು ಗೆಲ್ಲುತ್ತೆ.ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎಫೆಕ್ಟಿವ್ ಆಗಿ ಇರಲಿಲ್ಲ.ಅಧಿಕಾರವನ್ನು ಕಂಟ್ರೋಲ್ ಮಾಡೊಕೆ ಆಗಿರಲಿಲ್ಲ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಿಗಳ ಮೇಲೆ ಸ್ಟ್ರಾಂಗ್ ಇದ್ದಾರೆ.ಆದರೆ ಅವರು ಹೋಗುತ್ತಿರುವ ದಾರಿ ಸರಿಯಿಲ್ಲ. ಗ್ಯಾರಂಟಿ ಕೊಟ್ಟು ಜನಪ್ರಿಯ ಆಗಿರಬಹುದು.ಆದರೆ ಇವರ ಬಳಿ ಹಣ ಇಲ್ಲ.
ಈಗಾಗಿ ಕೇಂದ್ರದ ಮೇಲೆ ಬೈಯ್ಯುತ್ತಾರೆ ಎಂದು ಹೇಳಿದ್ದರು.

ರಾಜ್ಯದವರ ಭಾಷೆ ಅನ್ ಡಿಗ್ನಿಫೈಡ್ ಲಾಂಗ್ವೇಜ್
ಕಾಂಗ್ರೆಸ್ ನವರಿಗೆ ಗೌರವ ಕೊಟ್ಟು ಮಾತನಾಡುವ ಕಲ್ಚರ್ ಇಲ್ಲ.ಆದರೆ ಬಿಜೆಪಿ ಅವರಿಗೆ ಅದು ಇದೆ.
ಅಕಸ್ಮಾತ್ ಬಿಜೆಪಿಯವರು ಹೊರಟಾಗಿ ಮಾತಾಡ್ತಿದ್ದಾರೆ ಅಂದ್ರೆ ಅವರು ಕಾಂಗ್ರೆಸ್ ಫಾಲೋ ಮಾಡ್ತಿದ್ದಾರೆ ಅಂತ ಅವರು ಏನೇ ಮಾತಾಡಿದ್ರು ನಾವು ನಮ್ಮ ಘನತೆ ಕಡಿಮೆ ಮಾಡಿಕೊಳ್ಳಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

RELATED ARTICLES

Related Articles

TRENDING ARTICLES