Friday, May 10, 2024

ಯತೀಂದ್ರಗೆ ಮೆಚುರಿಟಿ ಇಲ್ಲ, ಬುದ್ದಿನೇ ಇಲ್ಲ : ಆರ್. ಅಶೋಕ್

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದು ಲಘುವಾಗಿ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್. ಅಶೊಕ್ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರಗೆ ಇನ್ ಮೆಚುರಿಟಿ, ಬುದ್ದಿ ಇಲ್ಲ. ಯಾರ ಬಗ್ಗೆ ಮಾತಾಡಬೇಕು ಅನ್ನೋ ಲೆವೆಲ್ ಇಲ್ಲದ ವ್ಯಕ್ತಿ. ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಬಾಲಿಷ ಹೇಳಿಕೆ ನೀಡಿದ್ದಾರೆ ಎಂದು ಕುಟುಕಿದರು.

ಅಮಿತ್ ಶಾ ಈ ದೇಶದ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಹಿಂದಿನಿಂದಲೂ ನೀಡುತ್ತಾ ಬರ್ತಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ಜೈಲು ಶಿಕ್ಷೆ ಅನುಭವಿಸೋ ಹಂತಕ್ಕೆ ಬಂದಿದ್ದಾರೆ. ಇವರ ಡಿಎನ್ಎನಲ್ಲೇ ಅದು ಬಂದಿದೆ. ಇವರ ವಿರುದ್ಧ ದೂರು ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ನಾವು ಹಾಲು, ಜೇನಿನಂತೆ ಒಟ್ಟಾಗಿದ್ದೇವೆ

ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜಂಟಿ ಸಮನ್ವಯ ಸಭೆ ಬಗ್ಗೆ ಮಾತನಾಡಿ, ಈಗಾಗಲೇ ಹಾಲು, ಜೇನಿನಂತೆ ಒಟ್ಟಾಗಿದ್ದೇವೆ. ಈಗಾಗಲೇ ಕುಮಾರಸ್ವಾಮಿ ಅವರ ಜೊತೆ ಸಭೆ ಮಾಡಿದ್ದೇವೆ. ಎಲ್ಲಾ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಹಾಗಾಗಿ ಒಟ್ಟಿಗೆ ಕೆಲಸ ಮಾಡೋ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಸರ್ಕಾರ ಬರಕ್ಕೆ ಹಣ ನೀಡಿಲ್ಲ. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಭೆ ನಡೆದಿದೆ, ಮುಂದೆ ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಿ ಒಟ್ಟಾಗಿ ಹೋಗ್ತೀವಿ ಎಂದು ಆರ್. ಅಶೊಕ್ ಹೇಳಿದರು.

RELATED ARTICLES

Related Articles

TRENDING ARTICLES