ತುಮಕೂರು: ಜೆಡಿಎಸ್ ಎಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆಸಿದ್ದಾರೆ.ಹಾಗದರೆ ದೇಶದಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿ ತಲುಪಿದೆ ಎಲ್ಲಿದೆ ಕಾಂಗ್ರೆಸ್ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪ್ರಶ್ನೆಸಿದ್ದಾರೆ.
ಇಂದು ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು,ಇತರೆ ಪಕ್ಷ ಬೆಂಬಲದೊಂದಿಗೆ ಸರ್ಕಾರ ರಚಿಸಿರುವುದು ಸೇರಿದಂತೆ ಇಡೀ ದೇಶದಲ್ಲಿ ರಾಜಸ್ತಾನ್, ಮಧ್ಯ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿ ಇದೆ.ಸಿದ್ದರಾಮಯ್ಯನವರ ಕುತಂತ್ರ ಬುದ್ದಿಯಿಂದಾಗಿ ಕಾಂಗ್ರೆಸ್ಗೆ ಇಂತಹ ದುಃಸ್ಥಿತಿ ಬಂದಿದೆ. ಮೈಸೂರಿನಲ್ಲಿ ಗೌರವಾನ್ವಿತ ಮುಖ್ಯಮಂತ್ರಿ ಹೇಳ್ತಾರೆ ಜೆಡಿಎಸ್ ಎಲ್ಲಿದೆ ಅಂತಾ ಪ್ರಶ್ನೆ ಮಾಡ್ತಾರೆ ಈಗ ನಿಮ್ಮ ಕಾಂಗ್ರೆಸ್ ಎಲ್ಲಿದೆ ಎಂದು ಕುಟುಕಿದರು.
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಂಡಿದ್ದರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದೆ. ಬಲವಂತವಾಗಿ ಕರೆತಂದು ತುಮಕೂರು ಕ್ಷೇತ್ರದಿಂದ ನಿಲ್ಲುವಂತೆ ಮಾಡಿ ಸೋಲಿಸಿದರು. ಮೈಸೂರು ಕ್ಷೇತ್ರದ ಟಿಕೆಟ್ಗಾಗಿ ನನ್ನನ್ನು ನಿಲ್ಲುವಂತೆ ಮಾಡಿದರು. ಸಚಿವ ಕೆ.ಎನ್.ರಾಜಣ್ಣ ಜತೆಗೆ ಸೇರಿಕೊಂಡು ರಾತ್ರಿ ಒಂದು ಗಂಟೆವರೆಗೂ ಸಭೆ ನಡೆಸಿ, ಪಿತೂರಿ ಮಾಡಿ ಸೋಲಿಸಲು ಕಾರಣಕರ್ತರಾಗಿದ್ದೀರಿ’ ಎಂದು ಆರೋಪಿಸಿದರು.
‘ವಾಲ್ಮೀಕಿ ಸಮುದಾಯಕ್ಕೆ ನಾನು ಮಾಡಿದ ಸೇವೆ ಸ್ಮರಿಸುವುದಾದರೆ ಯಾವುದೇ ಕಾರಣಕ್ಕೂ ಕೆ.ಎನ್.ರಾಜಣ್ಣ ಅವರನ್ನು ನಂಬಬಾರದು. ಅವರು ನಂಬಿಕೆ, ವಿಶ್ವಾಸಕ್ಕೆ ಅರ್ಹರಲ್ಲ’ ಎಂದು ಮನವಿ ಮಾಡಿದರು.
‘ನಮ್ಮ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇರಲಿಲ್ಲ. ಯಾವ ಸಚಿವರೂ ಸ್ಪರ್ಧಿಸುವುದಾಗಿ ಹೇಳಲಿಲ್ಲ. ಕಾಂಗ್ರೆಸ್ ಇಂತಹ ಸ್ಥಿತಿಯಲ್ಲಿ ಇರಬೇಕಾದರೆ ನನ್ನ ಮೇಲೆ ಇಲ್ಲಸಲ್ಲದ ಆಪಾದನೆ ಮಾಡುತ್ತಿದ್ದಾರೆ. ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡರು ಎನ್ನುತ್ತಿದ್ದಾರೆ. ಅದಕ್ಕೆ ಯಾರು ಕಾರಣ. ನಮ್ಮ ಮೈತ್ರಿ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು.
ಬಿಜೆಪಿ ಜತೆಗೆ ಮಾಡಿಕೊಂಡಿರುವ ಮೈತ್ರಿ ಲೋಕಸಭೆ ಚುನಾವಣೆಯ ನಂತರವೂ ಮುಂದುವರಿಯಲಿದೆ ಎಂದರು.