ಬೆಂಗಳೂರು: ಅಭಿಷೇಕ್ ರಾಜಕೀಯಕ್ಕೆ ಬಂದ್ರೆ, ನಾನು ಚುನಾವಣೆಗೆ ನಿಲ್ಲಲ್ಲ. ಅಭಿಷೇಕ್ ರಾಜಕೀಯಕ್ಕೆ ಬಂದ್ರೆ ನಾನು ಮನೆಯಲ್ಲೇ ಇರುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜೆಪಿ ನಗರದಲ್ಲಿರೋ ಸಂಸದೆ ಸುಮಲತಾ ಅಂಬರೀಶ್ ಅವರ ಮನೆಗೆ ಭೇಟಿ ನೀಡಿದ್ದರು. ಮಾತುಕತೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಯಾರಾದ್ರೂ ಒಬ್ಬರು ರಾಜಕೀಯದಲ್ಲಿ ಇರಬೇಕು.ಅಭಿಷೇಕ್ ರಾಜಕೀಯಕ್ಕೆ ಬಂದ್ರೆ, ನಾನು ಚುನಾವಣೆಗೆ ನಿಲ್ಲಲ್ಲ. ಅಭಿಷೇಕ್ ರಾಜಕೀಯಕ್ಕೆ ಬಂದ್ರೆ ನಾನು ಮನೆಯಲ್ಲೇ ಇರುತ್ತೇನೆ ಎಂದರು.
ನನ್ನ ಸ್ಪರ್ಧೆ ಬಗ್ಗೆ ಹೆಚ್ಡಿಕೆ ಬಳಿ ಏನು ಚರ್ಚೆ ಮಾಡಿಲ್ಲ
ಇಬ್ಬರ ಮಧ್ಯೆ ಆರೋಗ್ಯಕರ ಚರ್ಚೆ ನಡೆದಿದೆ. ಭಿನ್ನಾಭಿಪ್ರಾಯ ಇತ್ತು, ಮನಸ್ಸಿನಲ್ಲಿ ಇಟ್ಟುಕೊಳ್ಳಬೇಡಿ ಎಂದಿದ್ದಾರೆ. ಹಿತೈಷಿಗಳ ಒಪ್ಪಿಗೆ ಪಡೆಯದೆ ತೀರ್ಮಾನ ಮಾಡಲು ಸಾಧ್ಯವಿಲ್ಲ ಎಂದಿದ್ದೇನೆ. ಇದಕ್ಕೆ ಅವರು ಒಪ್ಪಿದ್ದಾರೆ. ಏಪ್ರಿಲ್ 3ರಂದು ನನ್ನೊಂದಿಗೆ ದರ್ಶನ್, ಅಭಿಷೇಕ್ ಇರಲಿದ್ದಾರೆ. ಅವರೊಂದಿಗೆ ಚರ್ಚಿಸಿ ನನ್ನ ತೀರ್ಮಾನ ತಿಳಿಸುತ್ತೇನೆ. ಮಂಡ್ಯದ ಜನರಿಗೆ ಒಳ್ಳೆಯದು ಆಗೋ ತೀರ್ಮಾನ ಮಾಡುತ್ತೇನೆ ಎಂದರು.