Saturday, May 4, 2024

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಭರ್ಜರಿ ಪ್ರಚಾರ

ಬೆಂಗಳೂರು : ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಈ ಬಾರಿ ಎದುರಾಳಿ ಬಿಜೆಪಿ ಅಭ್ಯರ್ಥಿಯನ್ನ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದು, ಬೆಳಗ್ಗೆಯಿಂದ ರಾತ್ರಿವರೆಗೆ ಮತಭೇಟೆ ನಡೆಸುತ್ತಿದ್ದಾರೆ. ಹೋದಲ್ಲೆಲ್ಲಾ ಮನ್ಸೂರ್ ಅಲಿ ಖಾನ್​ ಅವರಿಗೆ ಉತ್ತಮ ರೆಸ್ಪಾನ್ಸ್ ಸಿಕ್ತಿದೆ.

ಕಾಂಗ್ರೆಸ್ ಪಂಚ ಗ್ಯಾರಂಟಿಗಳ ಕಡೆ ಮತದಾರರು ಒಲವು ವ್ಯಕ್ತಪಡಿಸುತ್ತಿದ್ದಾರೆ. ಇಂದು ಬೆಳಗ್ಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿ, ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳ ಸಕ್ಸಸ್ ಬಗ್ಗೆ ಚರ್ಚೆ ನಡೆಸಿದರು. ಪ್ರತೀ ಮನೆ-ಮನೆಗೆ ಗ್ಯಾರಂಟಿ ಯೋಜನೆಗಳನ್ನ ತಲುಪಿಸುವಂತೆ ಮನವಿ ಮಾಡಿದರು.

ಮಧ್ಯಾಹ್ನ ಶಾಂತಿನಗರದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿದರು. ಬೂತ್​ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದರು. ಸಂಜೆ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿನಗರ, ಚಿಕ್ಕಪೇಟೆಯಲ್ಲೂ ಕಾರ್ಯಕರ್ತರ ಸಭೆ ನಡೆಸಿ, ಮತಯಾಚನೆ ಮಾಡಿದರು.

ಒಟ್ಟು 55 ಜನ ನಾಮಪತ್ರ ಸಲ್ಲಿಕೆ

ಲೋಕಸಭೆಯ ಚುನಾವಣೆಗೆ ಇನ್ನೆನು ಕೆಲವೇ ದಿನ ಬಾಕಿ. ಹೀಗಾಗಿ, ನಾಮಪತ್ರ ಸಲ್ಲಿಕೆ ಚಟುವಟಿಕೆ ಜೋರಾಗಿದೆ. ಇಂದು ಎಲ್ಲಿಲ್ಲಿ ನಾಮಪತ್ರ ಸಲ್ಲಿಕೆ ಯಾಗಿದೆ ಅನ್ನೋದರ ಬಗ್ಗೆ ರಾಜ್ಯ ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಒಟ್ಟು 55 ಜನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿಯಿಂದ 8, ಕಾಂಗ್ರೆಸ್ ನಿಂದ 6, ಜೆಡಿಎಸ್ ನಿಂದ ಒಂದು ನಾಮಪತ್ರ ಸಲ್ಲಿಕೆ ಆಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಟಿಎಂ ಲೇಔಟ್ ಬಳಿ 16,59,778 ನಗದು ಜಪ್ತಿ ಮಾಡಲಾಗಿದೆ.

RELATED ARTICLES

Related Articles

TRENDING ARTICLES