ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಶ್ರೀನಿವಾಸ್ ಅವರು ಬಲಿಜ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮೈಸೂರಿನ ಜಯನಗರದಲ್ಲಿ ನಡೆದ ಬಲಿಜ ಸಂಘದ ಚುನಾವಣೆಯಲ್ಲಿ ಗೆಲುವು ಪಡೆದಿದ್ದಾರೆ. ಈ ಚುನಾವಣೆಯಲ್ಲಿ ಮೀನಾ ಅವರು 375 ಮತಗಳ ಪೈಕಿ 221 ಮತ ಪಡೆದು ಜಯ ಗಳಿಸಿದ್ದಾರೆ. ಅತಿಹೆಚ್ಚು ಮತ ಪಡೆದು ಬಲಿಜ ಸಂಘಕ್ಕೆ ಆಯ್ಕೆಯಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಬಲಿಜ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಮೀನಾ ತೂಗುದೀಪ ಶ್ರೀನಿವಾಸ್ ಹೇಳಿದ್ದಾರೆ.
ಕಳೆದ ವರ್ಷ ದರ್ಶನ್ ಅವರ ತಾಯಿಗೆ ಗೆಲುವು ಲಭಿಸಿತ್ತು. ಮೈಸೂರಿನ ತ್ಯಾಗರಸ್ತೆಯ ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಯಲ್ಲಿ ಮೀನಾ ತೂಗುದೀಪ ಶ್ರೀನಿಸ್ ಗೆಲುವು ಸಾಧಿಸಿದ್ದರು. ಬ್ಯಾಂಕ್ ಸದಸ್ಯರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇವರು ಗೆಲುವು ಪಡೆದಿದ್ದರು.
ಬ್ಯಾಂಕ್ ಚುನಾವಣೆಯಲ್ಲೂ ಭರ್ಜರಿ ಗೆಲುವು
ಈ ಚುನಾವಣೆಯಲ್ಲಿ ಸುಮಾರು 1,200 ಸದಸ್ಯರು ಮತ ಚಲಾವಣೆ ಮಾಡಿದ್ದರು. ದರ್ಶನ್ ತಾಯಿ ಮೀನಾ ಅವರಿಗೆ 642 ಮತಗಳು ದೊರಕಿದ್ದವು. ಇದೀಗ ಬಲಿಜ ಸಂಘದ ಚುನಾವಣೆಯಲ್ಲೂ 221 ಮತಗಳನ್ನು ಪಡೆದು ಗೆಲುವು ಪಡೆದಿದ್ದಾರೆ.