Friday, May 17, 2024

ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್ : ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿ ಹಾರ್ದಿಕ್ ಪಾಂಡ್ಯ?

ಬೆಂಗಳೂರು : ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್​ನ 14 ನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಮೊದಲ ಜಯ ಸಾಧಿಸುವ ಗುರಿ ಹೊಂದಿದೆ. ಆಡಿರುವ ಎರಡು ಪಂದ್ಯ ಗೆದ್ದಿರುವ ರಾಜಸ್ಥಾನ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಮೊದಲೆರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇಂದು ತವರು ಮೈದಾನದಲ್ಲಿ ರಾಜಸ್ಥಾನ ತಂಡವನ್ನು ಮಣಿಸಿ, ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ. ಆರ್​ಸಿಬಿ ಹೊರತುಪಡಿಸಿ ಎಲ್ಲಾ ತಂಡಗಳು ತವರು ಅಂಗಳದಲ್ಲಿ ಗೆಲುವಿನ ನಗೆ ಬೀರಿವೆ. ಮುಂಬೈ ಆ ಟ್ರೆಂಡ್ ಮುಂದುವರಿಸುತ್ತಾ ಎಂದು ಕಾದು ನೋಡಬೇಕಿದೆ.

ಮುಂಬೈ ಇಂಡಿಯನ್ಸ್

ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ತಿಲಕ್ ವರ್ಮಾ, ಟಿಮ್ ಡೇವಿಡ್, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಜಸ್ಪ್ರೀತ್ ಬುಮ್ರಾ, ಕ್ವೈನ್ ಮಫಕಾ.

ಇಂಪ್ಯಾಕ್ಟ್ ಪ್ಲೇಯರ್ : ಡೆವಾಲ್ಡ್ ಬ್ರೂವಿಸ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ನೆಹಾಲ್ ವಧೇರಾ, ಶಮ್ಸ್ ಮುಲಾನಿ.

ರಾಜಸ್ಥಾನ್ ರಾಯಲ್ಸ್

ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್/ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಾಹಲ್

ಇಂಪ್ಯಾಕ್ಟ್ ಪ್ಲೇಯರ್ : ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಕುಲದೀಪ್ ಸೇನ್, ಶುಭಂ ದುಬೆ, ಅಬಿದ್ ಮುಷ್ತಾಕ್.

 

RELATED ARTICLES

Related Articles

TRENDING ARTICLES