Sunday, May 19, 2024

ಒಬ್ರು ಕುರ್ಚಿ ಉಳಿಸಿಕೊಳ್ಳಲು ಹೋರಾಡ್ತಿದ್ದಾರೆ, ಮತ್ತೊಬ್ರು ಕುರ್ಚಿ ಕಿತ್ತುಕೊಳ್ಳಲು ಹೋರಾಡ್ತಿದ್ದಾರೆ : ಅಮಿತ್ ಶಾ ವ್ಯಂಗ್ಯ

ಬೆಂಗಳೂರು : ಒಬ್ಬರು ಕುರ್ಚಿ ಉಳಿಸಿಕೊ ಹೋರಾಡುತ್ತಿದ್ದರೆ, ಮತ್ತೊಬ್ಬರು ಕುರ್ಚಿ ಕಿತ್ತುಕೊಳ್ಳಲು ಹೋರಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಲೇವಡಿ ಮಾಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶ ಹಾಗೂ ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ ಎಂದು ಕುಟುಕಿದರು.

ಕಾಂಗ್ರೆಸ್​ ದುಷ್ಟ ಆಡಳಿತದ ಮಾಹಿತಿ ತಲುಪಿಸಿ

ರಾಜ್ಯದಲ್ಲಿ ಮೂರೂವರೆ ಕೋಟಿಗೂ ಅಧಿಕ ಕನ್ನಡಿಗರು ಪ್ರಧಾನಿ ಮೋದಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ರಾಜ್ಯದ ಮನೆ ಮನೆಗಳಿಗೂ ಮೋದಿ ಅವರ ಸಾಧನೆಗಳನ್ನು ಮತ್ತು ಕಾಂಗ್ರೆಸ್ ಸರ್ಕಾರದ ದುಷ್ಟ ಆಡಳಿತದ ಮಾಹಿತಿಗಳನ್ನು ನಾವು ತಲುಪಿಸಬೇಕು ಎಂದು ಕರೆ ಕೊಟ್ಟರು.

ಎಲ್ಲರನ್ನೂ ಪ್ರಚಂಡ ಬಹುಮತದಿಂದ ಗೆಲ್ಲಿಸಿ

ಶಕ್ತಿ ಕೇಂದ್ರದ ಪ್ರಮುಖರು ಭಾರತೀಯ ಜನತಾ ಪಾರ್ಟಿಯ ಶಕ್ತಿ. ನಮ್ಮೆಲ್ಲಾ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು. ಆ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಜವಾಬ್ದಾರಿ ಶಕ್ತಿ ಕೇಂದ್ರಗಳ ಪ್ರಮುಖರದ್ದು ಎಂದು ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಮನವರಿಕೆ ಮಾಡಿದರು.

RELATED ARTICLES

Related Articles

TRENDING ARTICLES