Monday, May 20, 2024

ಪ್ರಜ್ವಲ್ ರೇವಣ್ಣನ್ನ ಸೋಲಿಸಲು ಕಾಂಗ್ರೆಸ್​ ಪಣ ತೊಟ್ಟಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ‌ಪ್ರಜ್ವಲ್ ರೇವಣ್ಣನ್ನ ಸೋಲಿಸಲು ಕಾಂಗ್ರೆಸ್​ ಪಣ ತೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಬಾರಿ ಜೆಡಿಎಸ್ ನವರು ಮೂರಲ್ಲೂ ಸೋಲುತ್ತಾರೆ.ಕಳೆದ ಬಾರಿ ಮೈಸೂರಿನಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕಿದ್ದು ಯಾವ ಚೂರಿ.ಮೈತ್ರಿ ಧರ್ಮ ಎಂದರೆ ಎಲ್ಲಾ ಕ್ಷೇತ್ರಕ್ಕೂ ಒಂದೇ.ಮೈಸೂರಿನಲ್ಲಿ ಚೂರಿ ಹಾಕಿ ಈಗ ಮಂಡ್ಯದಲ್ಲಿ ನಮಗೆ ಚೂರಿ ಹಾಕಿದರ ಎಂದರೇ ಅದರಲ್ಲಿ ಯಾವ ನ್ಯಾಯ ಇದೆ ಹೇಳಿ.ಕಳೆದ ಬಾರಿ ನಾನು ಹೋಗಿದ್ದಕ್ಕೆ ಹಾಸನದಲ್ಲಿ ಪ್ರಜ್ವಲ್ ಗೆದಿದ್ದು.
ಈ ಬಾರಿಯೂ ಹಾಸನಕ್ಕೆ ಹೋಗುತ್ತೇನೆ.ಪ್ರಜ್ವಲ್ ನನ್ನು ಸೋಲಿಸುತ್ತೇನೆ ಎಂದರು.

ಪ್ರಜ್ವಲ್ ಸೋಲಿಸಲೇ ಬೇಕೆಂದು ನಮ್ಮವರು ಪಣ ತೊಟ್ಟಿದ್ದಾರೆ.ಪ್ರಜ್ವಲ್ ಸೋಲುತ್ತಾನೆ ಎಂದು ಹೇಳಿದ್ದರು.

ಮಂಡ್ಯದ ಸ್ಪರ್ಧೆ ದೇವರ ಇಚ್ಚೆ ಎಂದ ಎಚ್.ಡಿ.ಕೆ ಹೇಳಿಕೆಗೆ ಬಗ್ಗೆ ಮಾತನಾಡಿದ ಅವರು, ಮಗನನ್ನ ನಿಲ್ಲಿಸುವಾಗ ಯಾರ ಇಚ್ಚೇ ಇತ್ತು.ಈಗ ದೇವರು ಎಂದರೆ ಆಗ ಯಾರಿದರು.ಸಿಎಂ ಆಗಿದ್ದಾಗಲೇ ಅವರ ಮಗ ಅಲ್ಲಿ ಸೋತ್ತಿದ್ದಾನೆ ಎಂದು ವ್ಯಂಗ್ಯ  ಮಾಡಿದ್ದರು.

RELATED ARTICLES

Related Articles

TRENDING ARTICLES