Thursday, May 9, 2024

ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನಗೆ ಆತಂಕ ಇದ್ದರೆ ತಾನೇ ಟೆನ್ಷನ್ ನನಗೆ ಯಾವ ಆತಂಕವೂ ಇಲ್ಲ ಹೀಗಾಗಿ ನಾನು ಕೂಲ್ ಆಗಿ ಇದ್ದೇನೆ.ಅದು ಕೂಡ ನನ್ನ ಆರೋಗ್ಯದ ಗುಟ್ಟು ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳಿದರು.ಆದರೆ ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ ಎಂದರು.

ಮುಂದಿನ ನಾಲ್ಕು ವರ್ಷಕ್ಕೆ ನನಗೆ 79 ವಯಸ್ಸು ಆಗಿ ಬಿಡುತ್ತದೆ. 79 ವಯಸ್ಸು ಆದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ.ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತೆ‌
ಇದಕ್ಕೆ ಚುನಾವಣಾ ರಾಜಕಾರಣ ಸಾಕು ಎಂದಿಕೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES

Related Articles

TRENDING ARTICLES