Wednesday, May 1, 2024

ಅನಾರೊಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಿವಣ್ಣ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.

ಕಿಡ್ನಿ ಸ್ಟೋನ್ ಆಗಿತ್ತು ಎನ್ನುವ ಮಾಹಿತಿ ಹೊರತುಪಡಿಸಿ ಯಾವುದೇ ಗಂಭೀರ ಸ್ವರೂಪದ ಕಾರಣಗಳು ತಿಳಿದುಬಂದಿಲ್ಲ ಎಂದ ವೈದ್ಯರ ಮೂಲಗಳು ತಿಳಿಸಿದೆ. ಇದೀಗ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು ಇಂದು ಡಿಸ್ಚಾರ್ಜ್ ಆದ ನಂತರ ಮತ್ತೆ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಅಮಿತ್​ ಶಾ ವಿರುದ್ದ ವಾಗ್ದಾಳಿ: ಸಿಎಂ ಪುತ್ರ ಯತೀಂದ್ರಗೆ ಚುನಾವಣಾಧಿಕಾರಿಗಳಿಂದ ನೋಟೀಸ್​

ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಸತತ ಚಿತ್ರೀಕರಣದಿಂದಾಗಿ ಹೆಚ್ಚು ದಣಿದಿದ್ದ ನಟ ಶಿವರಾಜ್​ಕುಮಾರ್​ ಅವರು ಶೂಟಿಂಗ್ ವೇಳೆ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಲಿದ್ದಾರೆ.

RELATED ARTICLES

Related Articles

TRENDING ARTICLES