ಬೆಂಗಳೂರು : ರಾಜ್ಯ ಹೈಕೋರ್ಟ್ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ರೇಜರ್ ಹಿಡಿದು ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ.
ಮೈಸೂರು ಮೂಲದ ಶ್ರೀನಿವಾಸ್ (51) ವರ್ಷ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಉಚ್ಚನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳಾದ ಅಂಜಾರಿಯಾ ಮತ್ತು ಡಾ. ಎಚ್.ಬಿ ಪ್ರಭಾಕರ ಶಾಸ್ತ್ರಿ ಅವರ ಪೀಠದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೆ ಆ ವ್ಯಕ್ತಿಯನ್ನು ವೈದ್ಯರ ಬಳಿಗೆ ಕರೆದುಕೊಂಡು ಹೋಗುವಂತೆ ಪೀಠ ಸೂಚಿಸಿತು.
ಇದನ್ನೂ ಓದಿ: ಮಂಡ್ಯ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದ ಸಂಸದೆ ಸುಮಲತಾ ಅಂಬರೀಶ್
ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಪರೇಷನ್ ಥಿಯೇಟರ್ಗೆ ಕರೆದೊಯ್ಯಲಾಗಿದೆ.