Monday, May 13, 2024

ರಾಜ್ಯ ಹೈಕೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!

ಬೆಂಗಳೂರು : ರಾಜ್ಯ ಹೈಕೋರ್ಟ್​ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ರೇಜರ್​ ಹಿಡಿದು ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ.

ಮೈಸೂರು ಮೂಲದ ಶ್ರೀನಿವಾಸ್​ (51) ವರ್ಷ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಉಚ್ಚನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳಾದ ಅಂಜಾರಿಯಾ ಮತ್ತು ಡಾ. ಎಚ್​.ಬಿ ಪ್ರಭಾಕರ ಶಾಸ್ತ್ರಿ ಅವರ ಪೀಠದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೆ ಆ ವ್ಯಕ್ತಿಯನ್ನು ವೈದ್ಯರ ಬಳಿಗೆ ಕರೆದುಕೊಂಡು ಹೋಗುವಂತೆ ಪೀಠ ಸೂಚಿಸಿತು.

ಇದನ್ನೂ ಓದಿ:  ಮಂಡ್ಯ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದ ಸಂಸದೆ ಸುಮಲತಾ ಅಂಬರೀಶ್​

ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ನಗರದ ಬೌರಿಂಗ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಪರೇಷನ್​ ಥಿಯೇಟರ್​ಗೆ ಕರೆದೊಯ್ಯಲಾಗಿದೆ.

RELATED ARTICLES

Related Articles

TRENDING ARTICLES