ಮಂಡ್ಯ : ತಾಯಿ ತಾಯಿನೇ.. ಸುಮಮ್ಮ ಏನೇ ಹೇಳಿದ್ರೂ ನಾನು ಮಾಡ್ತೀನಿ. ಕಣ್ಣು ಮುಚ್ಚಿ ಹಾಳು ಬಾವಿಗೆ ಬೀಳು ಅಂದ್ರೂ ಬೀಳ್ತೀನಿ ಎಂದು ನಟ ದರ್ಶನ್ ತೂಗುದೀಪ ಹೇಳಿದರು.
ಮಂಡ್ಯದಲ್ಲಿ ನಡೆ ಸಮಾರಂಬದಲ್ಲಿ ಮಾತನಾಡಿದ ಅವರು, ಸುಮಲತಾ ಅಮ್ಮ ಏನೇ ನಿರ್ಧಾರ ತೆಗೆದುಕೊಡರೂ ನಾನು ಅವರ ಹಿಂದೆ ಇರ್ತೀನಿ. ನಾನು ಹಾಗೂ ನನ್ನ ತಮ್ಮ ಅಭಿಷೇಕ್ ಸುಮಮ್ಮ ಮಾತಿಗೆ ಬದ್ಧವಾಗಿದೀವಿ ಎಂದು ತಿಳಿಸಿದರು.
ಯಮ ಬಂದ ಕರೆದರೆ, ಸುಮಮ್ಮನ ಒಂದು ಕೆಲಸ ಇದೆ ಮುಗಿಸಿ ಬರ್ತೀನಿ ಎಂದು ಹೇಳುತ್ತೇನೆ. ಅವರ ಕುಟುಂಬ ಜೊತೆಗಿನ ಬಾಂಧವ್ಯ ಅಂಥದ್ದು. ಇವತ್ತು ಕೈಗೆ ಆಪರೇಷನ್ ಇತ್ತು. ಆದರೆ, ಅಮ್ಮನ ಕೆಲಸ ಇದೆ ಎಂದು ಹೇಳಿ ಬಂದಿದ್ದೇನೆ. ಇಂದು ಸಂಜೆ ಆಸ್ಪತ್ರೆಗೆ ದಾಖಲಾಗಿ, ನಾಳೆ ಆಪರೇಷನ್ ಮಾಡಿಸಿಕೊಳ್ಳುತ್ತೇನೆ ಎಂದು ಹೇಳಿದರು.
ರೈತರು ಎಳನೀರು ಕೊಟ್ಟು ನನ್ನನ್ನು ತಣ್ಣಗೆ ಮಾಡಿದ್ರು
ನನ್ನ ಸೆಲೆಬ್ರಿಟಿಗಳಿಗೆ, ಹಿರಿಯರಿಗೆ ನಮಸ್ಕಾರ. ಇದೇ ಐದು ವರ್ಷಗಳ ಹಿಂದೆ ಪ್ರಚಾರ ಮಾಡಲು ಬಂದಾಗ ಎಲ್ಲಾ ರೈತರು ಎಳನೀರು ಕೊಟ್ಟು ನನ್ನನ್ನು ತಣ್ಣಗೆ ಮಾಡಿದರು, ಅವರಿಗೆ ಧನ್ಯವಾದ. ಆರತಿ ಬೆಳಗಿದ ತಾಯಂದಿರಿಗೂ ನನ್ನ ಧನ್ಯವಾದ ಎಂದು ಐದು ವರ್ಷಗಳ ಹಿಂದಿನ ಘಟನೆಗಳನ್ನು ದರ್ಶನ್ ಮೆಲುಕು ಹಾಕಿದರು.