Friday, May 17, 2024

ಸಾವು ಗೆದ್ದು ಬಾ ‘ಸಾತ್ವಿಕ್’ : ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು

ವಿಜಯಪುರ : ಸಾವು ಗೆದ್ದು ಬಾ ಕಂದ..! ಎರಡು ವರ್ಷದ ಪುಟ್ಟ ಕಂದ ತೆರೆದ ಕೊಳವೆ ಬಾವಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದಾನೆ. ಕಂದ.. ಸುರಕ್ಷಿತವಾಗಿ ಮರಳು ಎಂದು ಇಡೀ ಕುಟುಂಬ ಭಗವಂತನಲ್ಲಿ ಪ್ರಾರ್ಥಿಸುತ್ತಿದೆ.

ರಾಜ್ಯದಲ್ಲಿ ಮತ್ತೊಂದು ಹೃದಯ ವಿದ್ರಾವಕ ದುರಂತ ಸಂಭವಿಸಿದೆ. ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.

ಸಾತ್ವಿಕ್ ಮುಜಗೊಂಡ (2) ತೆರೆದ ಕೊಳವೆ ಬಾವಿಗೆ ಬಿದ್ದಿರುವ ಮಗು. ಆಟವಾಡಲು ಹೋಗಿದ್ದ ವೇಳೆ ಮಗು ಕೊಳವೆ ಬಾವಿಗೆ ಬಿದ್ದಿದೆ ಎಂದು ತಿಳಿದು ಬಂದಿದೆ.

ಸತೀಶ್ ಮತ್ತು ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ಇಂದು ಸಂಜೆ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಮಗುವಿನ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ತಾತ ಕೊರೆಸಿದ್ದ ಬೋರ್​ವೆಲ್

ಸಾತ್ವಿಕ್ ತಾತ ಶಂಕರಪ್ಪ ಮುಜಗೊಂಡ ಅವರು ಏಪ್ರಿಲ್ 2ರಂದು ಜಮೀನಿನಲ್ಲಿ ಬೋರ್​ವೆಲ್ ಕೊರೆಸಿದ್ದರು. ಸುಮಾರು 500 ಅಡಿ ಆಳ ಕೊರೆಸಲಾಗಿತ್ತು. ಆದ್ರೆ, ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದರು. ಇದೀಗ ಮೊಮ್ಮಗ ಸಾತ್ವಿಕ್ ಈ ಕೊಳವೆ ಬಾವಿಗೆ ಬಿದ್ದಿದ್ದಾನೆ.

RELATED ARTICLES

Related Articles

TRENDING ARTICLES