Wednesday, May 1, 2024

ತುಮಕೂರಿನಲ್ಲಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ: ಪರಮೇಶ್ವರ್‌​,ಕೆ ಎನ್​ ರಾಜಣ್ಣ,ಎಸ್ ಆರ್ ಶ್ರೀನಿವಾಸ್ ಸಾಥ್​

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ ಎದುರಾಳಿ  ಕಾಂಗ್ರೆಸ್​  ಅಭ್ಯರ್ಥಿ ಮುದ್ದಹನುಮೇಗೌಡ ಇಂದು ತುಮಕೂರಿನಲ್ಲಿ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಗೆ ಉಮೇದುವಾರಿಕೆ ಅವರಿಗೆ ನಾಮಪತ್ರ ಸಲ್ಲಿಸಿದರು.

ಸಚಿವರಾದ ಜಿ.ಪರಮೇಶ್ವರ್, ಕೆ ಎನ್ ರಾಜಣ್ಣ, ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮುದ್ದಹನುಮೇಗೌಡರಿಗೆ ಸಾಥ್ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆಗೆ ತುಮಕೂರಿನ ಬಿಜಿಎಸ್ ಸರ್ಕಲ್ ನಿಂದ ಡಿಸಿ ಕಚೇರಿವರೆಗೆ ನಡೆಯಲಿರುವ ಬೃಹತ್ ರ್ಯಾಲಿ ನಡೆಸಿದ್ದರು.

ಕಲ್ಪತರು ನಾಡಿನಲ್ಲಿ ಕೈ ಅಭ್ಯರ್ಥಿಯಿಂದ ಭರ್ಜರಿ ಶಕ್ತಿ ಪ್ರದರ್ಶನ

ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆಗೆ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಡೊಳ್ಳುಕುಣಿತ, ಗಾರುಡಿ ಗೊಂಬೆ ಕುಣಿತ, ನಾಸಿಕ್ ಡೋಲ್, ವೀರಗಾಸೆ ನೃತ್ಯ ಪ್ರದರ್ಶನ.ಪಿರಮಿಡ್ ರಚಿಸಿ ಕಾಂಗ್ರೆಸ್ ಬಾವುಟ ಹಾರಿಸಿಸಲಾಗಿದೆ.ಕಲಾತಂಡಗಳು,ಸಾಂಸ್ಕ್ರತಿಕ ತಂಡಗಳು ಮೆರವಣಿಗೆಯಲ್ಲಿ ವಿಶಿಷ್ಟ ಗಮನ ಸಳೆದೆವು.

 

RELATED ARTICLES

Related Articles

TRENDING ARTICLES