Saturday, May 11, 2024

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ನಮ್ಮ ಗುರಿ: ಬಿ.ವೈ.ರಾಘವೇಂದ್ರ

ಬ್ಯಾಕೋಡು: ಕೋವಿಡ್ ಸಂಧರ್ಭದಲ್ಲಿ ದೇಶದ ಜನರ ರಕ್ಷಣೆಗೆನಿಂತ ನರೇಂದ್ರ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿ ಮಾಡುವುದೇ ನಮ್ಮ ಗುರಿಯಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಶರಾವತಿ ಹಿನ್ನೀರಿನ ತುಮರಿ ಗೋಪಾಲಗೌಡ ರಂಗಮಂದಿರದಲ್ಲಿ ಬುಧವಾರ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗಿಂತ ಬಿಜೆಪಿ ಜನಪ್ರಿಯ ಯೋಜನೆಗಳು ಹೆಚ್ಚು ಜನಪರವಾಗಿದ್ದು, ದೇಶದ ಆರ್ಥಿಕ ಭದ್ರತೆಗೆ ಬಗ್ಗೆ ಜನರು ಯೋಚಿಸಿ ಮತದಾನ ಮಾಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಭಾರಿ ಕೆ.ಎಸ್‌.ಪ್ರಶಾಂತ್, ಬಿಜೆಪಿಯ ತಾಲೂಕು ಉಪಾಧ್ಯಕ್ಷ ನಾಗರಾಜ ಬೊಬ್ಬಿಗೆ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಸುವರ್ಣ ಟೀಕಪ್ಪ, ಕುದರೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಸರಸ್ವತಿ. ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಗಾಯತ್ರಿ ಮಲ್ಲಪ್ಪ ಮತ್ತಿತರರು ಹಾಜರಿದ್ದರು.

RELATED ARTICLES

Related Articles

TRENDING ARTICLES