Thursday, May 9, 2024

ಬಿಸಿಲಿನ ಝಳಕ್ಕೆ ವೃದ್ದ ಬಲಿ

ರಾಯಚೂರು : ಜಿಲ್ಲೆಯ ಲಿಂಗಸುಗೂರು ಪಟ್ಟದ ಬಸ್ ನಿಲ್ದಾಣದಲ್ಲಿ ಬಿಸಿಲಿನ ತಾಪಕ್ಕೆ ವೃದ್ಧರೊಬ್ಬರು ಸಾವೀಗೀಡಾಗಿಡಾಗಿರುವ ಘಟನೆ ನಡೆದಿದೆ.

ಮಸ್ಕಿ ತಾಲ್ಲೂಕಿನ ಆನಂದಗಲ್ಲ ಗ್ರಾಮದ ಕೃಷ್ಣಪ್ಪ ಬಳ್ಳಾರೆಪ್ಪ (62) ಮೃತಪಟ್ಟ ದುರ್ದೈವಿ, ಅನಾರೋಗ್ಯದ ಕಾರಣ ಚಿಕಿತ್ಸೆಗೆಂದು ಲಿಂಗಸುಗೂರು ಪಟ್ಟಣದ ಆಸ್ಪತ್ರೆಗೆ ಬಂದಿದ್ದರು. ಆದರೆ ಬುಧವಾರ 11 ಗಂಟೆ ಸುಮಾರಿಗೆ ಬಿಸಿಲಿನ ತಾಪ ತಾಳಲಾರದೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ:  ಕ್ಲರ್ಕ್​ ಹುದ್ದೆಗೆ ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ ಬರೆಸಿದ್ದ ಅಸಲಿ ಅಭ್ಯರ್ಥಿಗಳು ಅರೆಸ್ಟ್

ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಕಳೆದ ಒಂದು ವಾರದಿಂದ ರಾಯಚೂರಿನಲ್ಲಿ ಕನಿಷ್ಠ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮತ್ತಷ್ಟು ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಜನರಲ್ಲಿ ಆತಂಕ ಮೂಡಿದೆ.

RELATED ARTICLES

Related Articles

TRENDING ARTICLES