Thursday, May 9, 2024

ಬೆಳ್ಳಂ ಬೆಳಗ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

ರಾಯಚೂರು : ಬೆಳ್ಳಂಬೆಳಗ್ಗೆ ಗದ್ದೆಗೆ ನೀರು ಹಾಯಿಸಲು ಹೋದ ರೈತ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ದೇವತಗಲ್​ ಗ್ರಾಮದಲ್ಲಿ ನಡೆದಿದೆ.

ಅಪ್ಪಯ್ಯ ನಾಯಕ್​ (38) ಮೃತ ರೈತ, ಬೆಳಗಿನ ಜಾವ ತನ್ನ ಗದ್ದೆಗೆ ನೀರು ಹಾಯಿಸಲು ಹೋದಾಗ ಘಟನೆ ನಡೆದಿದೆ.

ಇದನ್ನೂ ಓದಿ: ಸ್ವಂತ ಬೈಕ್​,ಕಾರು, ಮನೆಯಿಲ್ಲದ ತೇಜಸ್ವಿ ಸೂರ್ಯ : ಒಟ್ಟು 4.10 ಕೋಟಿ ಆಸ್ತಿ ಒಡೆಯ

ಮೃತ ರೈತ ಅಪ್ಪಯ್ಯ ನಾಯಕ ದೇವತಗಲ್ ಗ್ರಾಮದಲ್ಲಿ ಮೂರು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿದ್ದ, ಇಂದು ಬೆಳಗಿನ ಜಾವ ಗದ್ದೆಗೆ ನೀರು ಕಟ್ಟುಲು ಹೋದಾಗ ಕೊಳವೆ ಬಾವಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದ ರೈತನನ್ನು ಕೂಡಲೇ ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ.

ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕ ಕರೆಮ್ಮ ನಾಯಕ್​ ಭೇಟಿ ನೀಡಿದ್ದು ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಘಟನೆಯೂ ಜಾಲಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES

Related Articles

TRENDING ARTICLES