Thursday, May 16, 2024

ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ನೀರುಪಾಲು

ಚಾಮರಾಜನಗರ : ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ನೀರುಪಾಲಾಗಿರುವ ಭೀಕರ ದುರಂತ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಮೀನಾ (33) ಪವಿತ್ರ (13) ಹಾಗೂ ಕೀರ್ತಿ (12) ಮೃತಪಟ್ಟ ದುರ್ದೈವಿಗಳು. ಮೃತರು ಹಹನೂರು ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದವರು.

ಇಂದು (ಶುಕ್ರವಾರ) ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ಈ ವೇಳೆ ಅವಘಡ ನಡೆದಿದೆ. ತಾಯಿ ಮೀನಾ ಅವರು ಬಟ್ಟೆ ತೊಳೆಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದಿದ್ದದಾರೆ.

ತಾಯಿಯನ್ನು ರಕ್ಷಿಸಲು ಪವಿತ್ರ ಹಾಗೂ ಕೀರ್ತಿ ಜಲಾಶಯಕ್ಕೆ ಇಳಿದಿದ್ದಾರೆ. ಈ ವೇಳೆ ಇಬ್ಬರು ಮಕ್ಕಳು ಸಹ ನೀರುಪಾಲಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES