ಬೆಂಗಳೂರು: ಎಸ್ ಟಿ ಸೋಮಶೇಖರ್ ಬಿಜೆಪಿಯಲ್ಲಿ ಇಲ್ಲ,ಅವರು ಕಾಲು ಹೊರಗಡೆ ಇಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎಸ್ ಟಿ ಸೋಮಶೇಖರ್ ಬಿಜೆಪಿಯಲ್ಲಿ ಇಲ್ಲ,ಕಾಂಗ್ರೆಸ್ ಅವರ ಜತೆ ಸಂಪರ್ಕದಲ್ಲಿ ಇದ್ದಾರೆ.ಅವರ ವಿರುದ್ಧ ಚುನಾವಣೆ ಬಳಿಕ ಬಿಜೆಪಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಹಾಕಿದ್ದಾರೆ. ನಮ್ಮ ಪಕ್ಷ ಬಿಟ್ಟು ಕಾಲು ಹೊರಗಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.