ಬೆಂಗಳೂರು: ಚಾಮರಾಜಪೇಟೆಯ ಟಿಆರ್ ಮೀಲ್ ಬಳಿ ಟೈಯರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಬೆಂಕಿಯ ಕೆನ್ನಾಲಿ ಗಗನದೆತ್ತರಕ್ಕೆ ಉರಿದಿದ್ದು,ಅದೃಷ್ಟವಶಾತ್ ಗೋಡೌನ್ನಲ್ಲಿ ಯಾರೂ ಇರಲಿಲ್ಲ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡವು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.
ಮುಂಜಾನೆ 4:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ.ಬೆಂಕಿ ತಗಲಿರೋ ಕಟ್ಟಡದಲ್ಲಿ ಸುಮಾರು 8 ಟಯರ್ ಅಂಗಡಿಗಳು ಇದ್ದು, ಅಷ್ಟು ಕೂಡ ಹೊತ್ತಿ ಉರಿಯುತ್ತಿವೆ.
ಘಟನಾ ಸ್ಥಳಕ್ಕೆ ಸಿಬ್ಬಂದಿ ಅಗ್ನಿಶಾಮಕ ವಾಹನಗಳು ಸುಮಾರು ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಬೆಂಕಿ ನಂದಿಸೋ ಕೆಲಸ ನಡೆದಿದೆ. ಗೋಡೌನ್ ನಾಲ್ಕು ಮೂಲೆಗಳಿಂದ ಬೆಂಕಿ ನಂದಿಸಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕದಳ ಹರಸಾಹಸವಾಗಿದೆ.